Advertisement
ವೆದರ್ ಮಿರರ್

ವೆದರ್‌ ಮಿರರ್‌ | ಹೆಚ್ಚುತ್ತಿರುವ ಹವಾಮಾನ ವೈಪರೀತ್ಯ ಸಮಸ್ಯೆ | ಏರುತ್ತಿರುವ ಉಷ್ಣತೆ | ಇಳಿಯುತ್ತಿರುವ ತೇವಾಂಶ |

Share

ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ ಬಹಳವಾಗಿ ಕಾಡುತ್ತಿರುವ ವಿಷಯ. ಏಕೆ ಹೀಗೆ ಎಂದು ಅಧ್ಯಯನಗಳು ನಡೆದರೆ ಭೂಮಿಯ ಉಷ್ಣತೆಯಲ್ಲಿ  ಏರಿಕೆ ಮೊದಲಾಗಿ ಕಂಡುಬರುತ್ತಿದೆ. ಈಚೆಗೆ ನಡೆದ ಅಂತರಾಷ್ಟ್ರೀಯ ಹವಾಮಾನ ಸಮ್ಮೇಳನದಲ್ಲೂ ಈ ಬಗ್ಗೆ ಚರ್ಚೆಯಾಗಿತ್ತು. ಮುಂದಿನ ದಿನಗಳಲ್ಲಿ  ಇಡೀ ಪ್ರಪಂಚದಲ್ಲಿ ಈಗಿನ ಉಷ್ಣತೆಗಿಂತ ಎರಡು ಡಿಗ್ರಿ ಕಡಿಮೆ ಮಾಡಲು ಶಿಫಾರಸು ಮಾಡಲಾಗಿತ್ತು. ಇದಕ್ಕಾಗಿ ಅರಣ್ಯ ಸಂರಕ್ಷಣೆ, ವಾಯು ಮಾಲಿನ್ಯ ಕಡಿಮೆ ಮಾಡುವುದು  ಸೇರಿದಂತೆ ಸೋಲಾರ್‌ ಬಳಕೆಗೆ ಆದ್ಯತೆ ನೀಡಲೂ  ಶಿಫಾರಸು ಮಾಡಲಾಗಿತ್ತು.

ಈಗಾಗಲೇ ಭಾರತಕ್ಕೆ ಈ ವರ್ಷದ ಪ್ರಥಮ ವಾಯುಭಾರ ಕುಸಿತವು ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದು ಇನ್ನೆರಡು ದಿನಗಳಲ್ಲಿ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದೆ. ಈಗಿನ ಮುನ್ಸೂಚೆನೆಯಂತೆ ಮಾರ್ಚ್ 7 ರಂದು ದಕ್ಷಿಣ ಕರ್ನಾಟಕದ ಒಳನಾಡಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಇದರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ತೇವಾಂಶ ಏರಿಕೆಯಾಗಿ ಮಾರ್ಚ್ 8 ರಿಂದ ಗುಡುಗು ಸಿಡಿಲು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 13 ರ ತನಕವೂ ಕರಾವಳಿ ಹಾಗೂ ಕೊಡಗಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಈ ನಡುವೆ ಶಿವರಾತ್ರಿ ಮುಗಿಯುತ್ತಿದ್ದಂತೆ ಸೆಖೆ ಆರಂಭವಾಗಬೇಕಿದ್ದ ಕಾಲದಲ್ಲಿ ಉಷ್ಣಾಂಶ ಮಾತ್ರ ಏರಿಕೆಯಾಗಿ ಶುಷ್ಕ ಹವೆ ಪ್ರಾರಂಭವಾಗಿರುವುದು ಮಳೆ ಬೀಳುವ ಸಾಧ್ಯತೆಯನ್ನು ದೂರ ಮಾಡಬಹುದೆ ? ಎಂಬ ಆತಂಕ ಮನೆಮಾಡಿದೆ. ಈ ವಾಯುಭಾರ ಕುಸಿತವು ಉತ್ತರ ಭಾರತದ ಕಡೆಯಿಂದ ಶುಷ್ಕ ಹವೆಯನ್ನು ಸೆಳೆಯುತ್ತಿದೆ. ಒಂದು ವಿಶ್ಲೇಷಣೆಯಂತೆ ವಾಯುಭಾರ ಕುಸಿತವು ತಮಿಳುನಾಡು ಪ್ರವೇಶಿಸಿದಂತೆ ವಾತಾವರಣದಲ್ಲಿ ತೇವಾಂಶ ಏರಿಕೆಯಾಗಬಹುದು.

ಕರಾವಳಿ ಭಾಗದಲ್ಲಿ ಈಗ ವಾತಾವರಣದ ಉಷ್ಣತೆ 38 ಡಿಗ್ರಿಯಿಂದ 41 ಡಿಗ್ರಿಯವರೆಗೂ ಏರಿಕೆಯಾಗುತ್ತದೆ, ಇಳಿಕೆಯಾಗುತ್ತದೆ. ಈ ನಡುವೆ ವಾತಾವರಣದ ತೇವಾಂಶವೂ ಕಡಿಮೆಯಾಗುತ್ತಿರುವುದು  ಗಮನಾರ್ಹ ಅಂಶವಾಗಿದೆ. ಕರಾವಳಿ ಪ್ರದೇಶದಲ್ಲೂ ಈಗ ಶೇಕಡಾ 12 – 15 ರಷ್ಟು ವಾತಾವರಣದ ತೇವಾಂಶ ಕಂಡುಬರುತ್ತಿದೆ. ಮಲೆನಾಡು ಪ್ರದೇಶದಲ್ಲೂ ತೇವಾಂಶ ಕುಸಿತವಾಗುವ ಕಾರಣದಿಂದ ಭೂಮಿಯ ಉಷ್ಣತೆ ಹೆಚ್ಚಾಗುತ್ತಿದೆ,  ಹೀಗಾಗಿ ಈಚೆಗೆ ಕೆಲವು ವರ್ಷಗಳಿಂದ ಕೃಷಿಗೆ ವಿಪರೀತವಾದ ಬಿಸಿಲಿನ ಸಮಸ್ಯೆ ಕಾಡುತ್ತಿರುವುದು  ಕಂಡುಬರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

9 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

9 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

9 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

14 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago