Advertisement
ವೆದರ್ ಮಿರರ್

ವೆದರ್‌ ಮಿರರ್‌ | ಹೆಚ್ಚುತ್ತಿರುವ ಹವಾಮಾನ ವೈಪರೀತ್ಯ ಸಮಸ್ಯೆ | ಏರುತ್ತಿರುವ ಉಷ್ಣತೆ | ಇಳಿಯುತ್ತಿರುವ ತೇವಾಂಶ |

Share

ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ ಬಹಳವಾಗಿ ಕಾಡುತ್ತಿರುವ ವಿಷಯ. ಏಕೆ ಹೀಗೆ ಎಂದು ಅಧ್ಯಯನಗಳು ನಡೆದರೆ ಭೂಮಿಯ ಉಷ್ಣತೆಯಲ್ಲಿ  ಏರಿಕೆ ಮೊದಲಾಗಿ ಕಂಡುಬರುತ್ತಿದೆ. ಈಚೆಗೆ ನಡೆದ ಅಂತರಾಷ್ಟ್ರೀಯ ಹವಾಮಾನ ಸಮ್ಮೇಳನದಲ್ಲೂ ಈ ಬಗ್ಗೆ ಚರ್ಚೆಯಾಗಿತ್ತು. ಮುಂದಿನ ದಿನಗಳಲ್ಲಿ  ಇಡೀ ಪ್ರಪಂಚದಲ್ಲಿ ಈಗಿನ ಉಷ್ಣತೆಗಿಂತ ಎರಡು ಡಿಗ್ರಿ ಕಡಿಮೆ ಮಾಡಲು ಶಿಫಾರಸು ಮಾಡಲಾಗಿತ್ತು. ಇದಕ್ಕಾಗಿ ಅರಣ್ಯ ಸಂರಕ್ಷಣೆ, ವಾಯು ಮಾಲಿನ್ಯ ಕಡಿಮೆ ಮಾಡುವುದು  ಸೇರಿದಂತೆ ಸೋಲಾರ್‌ ಬಳಕೆಗೆ ಆದ್ಯತೆ ನೀಡಲೂ  ಶಿಫಾರಸು ಮಾಡಲಾಗಿತ್ತು.

ಈಗಾಗಲೇ ಭಾರತಕ್ಕೆ ಈ ವರ್ಷದ ಪ್ರಥಮ ವಾಯುಭಾರ ಕುಸಿತವು ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದು ಇನ್ನೆರಡು ದಿನಗಳಲ್ಲಿ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದೆ. ಈಗಿನ ಮುನ್ಸೂಚೆನೆಯಂತೆ ಮಾರ್ಚ್ 7 ರಂದು ದಕ್ಷಿಣ ಕರ್ನಾಟಕದ ಒಳನಾಡಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಇದರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ತೇವಾಂಶ ಏರಿಕೆಯಾಗಿ ಮಾರ್ಚ್ 8 ರಿಂದ ಗುಡುಗು ಸಿಡಿಲು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 13 ರ ತನಕವೂ ಕರಾವಳಿ ಹಾಗೂ ಕೊಡಗಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಈ ನಡುವೆ ಶಿವರಾತ್ರಿ ಮುಗಿಯುತ್ತಿದ್ದಂತೆ ಸೆಖೆ ಆರಂಭವಾಗಬೇಕಿದ್ದ ಕಾಲದಲ್ಲಿ ಉಷ್ಣಾಂಶ ಮಾತ್ರ ಏರಿಕೆಯಾಗಿ ಶುಷ್ಕ ಹವೆ ಪ್ರಾರಂಭವಾಗಿರುವುದು ಮಳೆ ಬೀಳುವ ಸಾಧ್ಯತೆಯನ್ನು ದೂರ ಮಾಡಬಹುದೆ ? ಎಂಬ ಆತಂಕ ಮನೆಮಾಡಿದೆ. ಈ ವಾಯುಭಾರ ಕುಸಿತವು ಉತ್ತರ ಭಾರತದ ಕಡೆಯಿಂದ ಶುಷ್ಕ ಹವೆಯನ್ನು ಸೆಳೆಯುತ್ತಿದೆ. ಒಂದು ವಿಶ್ಲೇಷಣೆಯಂತೆ ವಾಯುಭಾರ ಕುಸಿತವು ತಮಿಳುನಾಡು ಪ್ರವೇಶಿಸಿದಂತೆ ವಾತಾವರಣದಲ್ಲಿ ತೇವಾಂಶ ಏರಿಕೆಯಾಗಬಹುದು.

ಕರಾವಳಿ ಭಾಗದಲ್ಲಿ ಈಗ ವಾತಾವರಣದ ಉಷ್ಣತೆ 38 ಡಿಗ್ರಿಯಿಂದ 41 ಡಿಗ್ರಿಯವರೆಗೂ ಏರಿಕೆಯಾಗುತ್ತದೆ, ಇಳಿಕೆಯಾಗುತ್ತದೆ. ಈ ನಡುವೆ ವಾತಾವರಣದ ತೇವಾಂಶವೂ ಕಡಿಮೆಯಾಗುತ್ತಿರುವುದು  ಗಮನಾರ್ಹ ಅಂಶವಾಗಿದೆ. ಕರಾವಳಿ ಪ್ರದೇಶದಲ್ಲೂ ಈಗ ಶೇಕಡಾ 12 – 15 ರಷ್ಟು ವಾತಾವರಣದ ತೇವಾಂಶ ಕಂಡುಬರುತ್ತಿದೆ. ಮಲೆನಾಡು ಪ್ರದೇಶದಲ್ಲೂ ತೇವಾಂಶ ಕುಸಿತವಾಗುವ ಕಾರಣದಿಂದ ಭೂಮಿಯ ಉಷ್ಣತೆ ಹೆಚ್ಚಾಗುತ್ತಿದೆ,  ಹೀಗಾಗಿ ಈಚೆಗೆ ಕೆಲವು ವರ್ಷಗಳಿಂದ ಕೃಷಿಗೆ ವಿಪರೀತವಾದ ಬಿಸಿಲಿನ ಸಮಸ್ಯೆ ಕಾಡುತ್ತಿರುವುದು  ಕಂಡುಬರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

21 minutes ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

15 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

15 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

16 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

16 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

17 hours ago