Advertisement
ವೆದರ್ ಮಿರರ್

ವೆದರ್‌ ಮಿರರ್‌ | ಹೆಚ್ಚುತ್ತಿರುವ ಹವಾಮಾನ ವೈಪರೀತ್ಯ ಸಮಸ್ಯೆ | ಏರುತ್ತಿರುವ ಉಷ್ಣತೆ | ಇಳಿಯುತ್ತಿರುವ ತೇವಾಂಶ |

Share

ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ ಬಹಳವಾಗಿ ಕಾಡುತ್ತಿರುವ ವಿಷಯ. ಏಕೆ ಹೀಗೆ ಎಂದು ಅಧ್ಯಯನಗಳು ನಡೆದರೆ ಭೂಮಿಯ ಉಷ್ಣತೆಯಲ್ಲಿ  ಏರಿಕೆ ಮೊದಲಾಗಿ ಕಂಡುಬರುತ್ತಿದೆ. ಈಚೆಗೆ ನಡೆದ ಅಂತರಾಷ್ಟ್ರೀಯ ಹವಾಮಾನ ಸಮ್ಮೇಳನದಲ್ಲೂ ಈ ಬಗ್ಗೆ ಚರ್ಚೆಯಾಗಿತ್ತು. ಮುಂದಿನ ದಿನಗಳಲ್ಲಿ  ಇಡೀ ಪ್ರಪಂಚದಲ್ಲಿ ಈಗಿನ ಉಷ್ಣತೆಗಿಂತ ಎರಡು ಡಿಗ್ರಿ ಕಡಿಮೆ ಮಾಡಲು ಶಿಫಾರಸು ಮಾಡಲಾಗಿತ್ತು. ಇದಕ್ಕಾಗಿ ಅರಣ್ಯ ಸಂರಕ್ಷಣೆ, ವಾಯು ಮಾಲಿನ್ಯ ಕಡಿಮೆ ಮಾಡುವುದು  ಸೇರಿದಂತೆ ಸೋಲಾರ್‌ ಬಳಕೆಗೆ ಆದ್ಯತೆ ನೀಡಲೂ  ಶಿಫಾರಸು ಮಾಡಲಾಗಿತ್ತು.

ಈಗಾಗಲೇ ಭಾರತಕ್ಕೆ ಈ ವರ್ಷದ ಪ್ರಥಮ ವಾಯುಭಾರ ಕುಸಿತವು ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದು ಇನ್ನೆರಡು ದಿನಗಳಲ್ಲಿ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದೆ. ಈಗಿನ ಮುನ್ಸೂಚೆನೆಯಂತೆ ಮಾರ್ಚ್ 7 ರಂದು ದಕ್ಷಿಣ ಕರ್ನಾಟಕದ ಒಳನಾಡಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಇದರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ತೇವಾಂಶ ಏರಿಕೆಯಾಗಿ ಮಾರ್ಚ್ 8 ರಿಂದ ಗುಡುಗು ಸಿಡಿಲು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 13 ರ ತನಕವೂ ಕರಾವಳಿ ಹಾಗೂ ಕೊಡಗಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಈ ನಡುವೆ ಶಿವರಾತ್ರಿ ಮುಗಿಯುತ್ತಿದ್ದಂತೆ ಸೆಖೆ ಆರಂಭವಾಗಬೇಕಿದ್ದ ಕಾಲದಲ್ಲಿ ಉಷ್ಣಾಂಶ ಮಾತ್ರ ಏರಿಕೆಯಾಗಿ ಶುಷ್ಕ ಹವೆ ಪ್ರಾರಂಭವಾಗಿರುವುದು ಮಳೆ ಬೀಳುವ ಸಾಧ್ಯತೆಯನ್ನು ದೂರ ಮಾಡಬಹುದೆ ? ಎಂಬ ಆತಂಕ ಮನೆಮಾಡಿದೆ. ಈ ವಾಯುಭಾರ ಕುಸಿತವು ಉತ್ತರ ಭಾರತದ ಕಡೆಯಿಂದ ಶುಷ್ಕ ಹವೆಯನ್ನು ಸೆಳೆಯುತ್ತಿದೆ. ಒಂದು ವಿಶ್ಲೇಷಣೆಯಂತೆ ವಾಯುಭಾರ ಕುಸಿತವು ತಮಿಳುನಾಡು ಪ್ರವೇಶಿಸಿದಂತೆ ವಾತಾವರಣದಲ್ಲಿ ತೇವಾಂಶ ಏರಿಕೆಯಾಗಬಹುದು.

ಕರಾವಳಿ ಭಾಗದಲ್ಲಿ ಈಗ ವಾತಾವರಣದ ಉಷ್ಣತೆ 38 ಡಿಗ್ರಿಯಿಂದ 41 ಡಿಗ್ರಿಯವರೆಗೂ ಏರಿಕೆಯಾಗುತ್ತದೆ, ಇಳಿಕೆಯಾಗುತ್ತದೆ. ಈ ನಡುವೆ ವಾತಾವರಣದ ತೇವಾಂಶವೂ ಕಡಿಮೆಯಾಗುತ್ತಿರುವುದು  ಗಮನಾರ್ಹ ಅಂಶವಾಗಿದೆ. ಕರಾವಳಿ ಪ್ರದೇಶದಲ್ಲೂ ಈಗ ಶೇಕಡಾ 12 – 15 ರಷ್ಟು ವಾತಾವರಣದ ತೇವಾಂಶ ಕಂಡುಬರುತ್ತಿದೆ. ಮಲೆನಾಡು ಪ್ರದೇಶದಲ್ಲೂ ತೇವಾಂಶ ಕುಸಿತವಾಗುವ ಕಾರಣದಿಂದ ಭೂಮಿಯ ಉಷ್ಣತೆ ಹೆಚ್ಚಾಗುತ್ತಿದೆ,  ಹೀಗಾಗಿ ಈಚೆಗೆ ಕೆಲವು ವರ್ಷಗಳಿಂದ ಕೃಷಿಗೆ ವಿಪರೀತವಾದ ಬಿಸಿಲಿನ ಸಮಸ್ಯೆ ಕಾಡುತ್ತಿರುವುದು  ಕಂಡುಬರುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

4 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

4 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

12 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

17 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

17 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago