07.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ ಹೀಗಿದೆ :
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ದುರ್ಬಲಗೊಂಡಿದ್ದು, ಕರ್ನಾಟಕದಲ್ಲಿ ಈ ಕಾರಣಕ್ಕೆ ಯಾವುದೇ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಇನ್ನು ಬೆಸುಗೆ ಮಳೆಯ ನಿರೀಕ್ಷೆಯ ಕಾಲ.
ಈಗಿನ ಮುನ್ಸೂಚನೆಯಂತೆ ಕೊಡಗು, ಸಕಲೇಶಪುರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಂಜೆ ರಾತ್ರಿ ಹಗುರವಾಗಿ ಮೋಡ ಕವಿದ ವಾತಾವರಣ ಇರಬಹುದು.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ವಾಯುಭಾರ ಕುಸಿತ ಶ್ರೀಲಂಕಾ ಕರಾವಳಿಯ ಕಡೆಗೆ ಚಲಿಸಲಿದೆ. ಆದರೆ ತಮಿಳುನಾಡಿನಲ್ಲಿ ಮಾರ್ಚ್ 7ರ ತನಕ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ. ತಮಿಳುನಾಡು ಮಾತ್ರವಲ್ಲ ಪುದಚೇರಿ, ಕಾರೈಕಲ್ನಲ್ಲಿಯೂ ಸಾಧಾರಣೆ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…