07.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ ಹೀಗಿದೆ :
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ದುರ್ಬಲಗೊಂಡಿದ್ದು, ಕರ್ನಾಟಕದಲ್ಲಿ ಈ ಕಾರಣಕ್ಕೆ ಯಾವುದೇ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಇನ್ನು ಬೆಸುಗೆ ಮಳೆಯ ನಿರೀಕ್ಷೆಯ ಕಾಲ.
ಈಗಿನ ಮುನ್ಸೂಚನೆಯಂತೆ ಕೊಡಗು, ಸಕಲೇಶಪುರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಂಜೆ ರಾತ್ರಿ ಹಗುರವಾಗಿ ಮೋಡ ಕವಿದ ವಾತಾವರಣ ಇರಬಹುದು.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ವಾಯುಭಾರ ಕುಸಿತ ಶ್ರೀಲಂಕಾ ಕರಾವಳಿಯ ಕಡೆಗೆ ಚಲಿಸಲಿದೆ. ಆದರೆ ತಮಿಳುನಾಡಿನಲ್ಲಿ ಮಾರ್ಚ್ 7ರ ತನಕ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ. ತಮಿಳುನಾಡು ಮಾತ್ರವಲ್ಲ ಪುದಚೇರಿ, ಕಾರೈಕಲ್ನಲ್ಲಿಯೂ ಸಾಧಾರಣೆ ಮಳೆಯಾಗಲಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…