ಉತ್ತರಭಾರತ‌ದಲ್ಲಿ ಏರಿದ ತಾಪಮಾನ | ಕೆಲವು ರಾಜ್ಯಗಳಲ್ಲಿ ಆರೆಂಜ್ ಎಲರ್ಟ್‌ | ಕೋಲ್ಕತ್ತಾ ಆಸುಪಾಸಿನಲ್ಲಿ ಮಳೆ |

April 30, 2022
10:56 PM

ಭಾರತದ ಕೆಲವು ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನಕ್ಕಿಂತ ಹೆಚ್ಚು ತಾಪಮಾನವು ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಡಾ ಎಂ ಮೊಹಾಪಾತ್ರ ಎಚ್ಚರಿಸಿದ್ದಾರೆ.  ಹರಿಯಾಣ, ಪಂಜಾಬ್, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ವಿದರ್ಭದಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದ್ದು ಹೀಟ್‌ವೇವ್ ಮೇ 2 ರವರೆಗೆ ಇರುತ್ತದೆ ಎಂದು ತಿಳಿಸಿದ್ದಾರೆ. ಈ ನಡುವೆ ಪಶ್ಚಿಮ ಬಂಗಾಳದ ವಿವಿದೆಡೆ ಮಳೆಯಾಗಿದ್ದು, ಕೋಲ್ಕತ್ತಾದಲ್ಲಿ 60 ದಿನಗಳ ನಂತರ ಮೊದಲ ಮಳೆಯಾಗಿದ್ದು, ಬಿಸಿಲಿನ ಅಲೆಯಿಂದ ಜನರಿಗೆ ಕೊಂಚ ನಿರಾಳವಾಗಿದೆ.

Advertisement
Advertisement

ದೆಹಲಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ವೀಕ್ಷಣಾಲಯದಲ್ಲಿ ಶುಕ್ರವಾರ ಗರಿಷ್ಠ ತಾಪಮಾನ 46.4 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದರೆ, ರಾಷ್ಟ್ರ ರಾಜಧಾನಿಯ ಮೂಲ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯದಲ್ಲಿ ಶನಿವಾರ ಕೊಂಚ ಇಳಿಕೆಯಾಗಿ  43.5 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ. ನಗರದಲ್ಲಿ 12 ವರ್ಷಗಳಲ್ಲೇ ಏಪ್ರಿಲ್‌ನಲ್ಲಿ ಒಂದು ದಿನದ ಗರಿಷ್ಠ ತಾಪಮಾನ ಇದಾಗಿದೆ. ಏಪ್ರಿಲ್ 18, 2010 ರಂದು ದೆಹಲಿಯಲ್ಲಿ ಗರಿಷ್ಠ ತಾಪಮಾನ 43.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಉತ್ತರ ಪ್ರದೇಶದ ಕೆಲವು ಪ್ರದೇಶಗಳಲ್ಲಿ  47.4 ಡಿಗ್ರಿ ತಲಪಿದೆ.  ಕೆಲವು ರಾಜ್ಯಗಳಲ್ಲಿ  ಇದೇ ಮಾದರಿಯಲ್ಲಿ ಉಷ್ಣತೆ ಏರಿಕೆ ಕಂಡಿದೆ. ಈ ವರ್ಷ ಏಪ್ರಿಲ್ ತಿಂಗಳ ವಾಯುವ್ಯ ಮತ್ತು ಮಧ್ಯ ಭಾರತದ ಸರಾಸರಿ ಗರಿಷ್ಠ ತಾಪಮಾನವು ಕಳೆದ 122 ವರ್ಷಗಳಲ್ಲಿ ದಾಖಲಾದ ಉಷ್ಣತೆಗಳಲ್ಲಿ ಅತ್ಯಧಿಕವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈ ನಡುವೆ ಕೋಲ್ಕತ್ತಾದಲ್ಲಿ 60 ದಿನಗಳ ನಂತರ ಮೊದಲ ಮಳೆಯಾಗಿದೆ. ಈಗಿನ ಪ್ರಕಾರ ಮೇ.4 ರವರೆಗೆ  ಕೋಲ್ಕತ್ತಾ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಬಹುದು  ಎಂದು ಹವಾಮಾನ ಇಲಾಖೆ ಹೇಳಿದೆ. ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಮಳೆಯಾಗದಿರುವುದು ಇದೇ ಮೊದಲು” ಎಂದು ಪ್ರಾದೇಶಿಕ ಹವಾಮಾನ ಇಲಾಖೆಯ ನಿರ್ದೇಶಕ ಜಿಕೆ ದಾಸ್ ಹೇಳಿದ್ದಾರೆ.

 

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ
July 26, 2025
9:12 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group