Advertisement
MIRROR FOCUS

ಉತ್ತರಭಾರತ‌ದಲ್ಲಿ ಏರಿದ ತಾಪಮಾನ | ಕೆಲವು ರಾಜ್ಯಗಳಲ್ಲಿ ಆರೆಂಜ್ ಎಲರ್ಟ್‌ | ಕೋಲ್ಕತ್ತಾ ಆಸುಪಾಸಿನಲ್ಲಿ ಮಳೆ |

Share

ಭಾರತದ ಕೆಲವು ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನಕ್ಕಿಂತ ಹೆಚ್ಚು ತಾಪಮಾನವು ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಡಾ ಎಂ ಮೊಹಾಪಾತ್ರ ಎಚ್ಚರಿಸಿದ್ದಾರೆ.  ಹರಿಯಾಣ, ಪಂಜಾಬ್, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ವಿದರ್ಭದಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದ್ದು ಹೀಟ್‌ವೇವ್ ಮೇ 2 ರವರೆಗೆ ಇರುತ್ತದೆ ಎಂದು ತಿಳಿಸಿದ್ದಾರೆ. ಈ ನಡುವೆ ಪಶ್ಚಿಮ ಬಂಗಾಳದ ವಿವಿದೆಡೆ ಮಳೆಯಾಗಿದ್ದು, ಕೋಲ್ಕತ್ತಾದಲ್ಲಿ 60 ದಿನಗಳ ನಂತರ ಮೊದಲ ಮಳೆಯಾಗಿದ್ದು, ಬಿಸಿಲಿನ ಅಲೆಯಿಂದ ಜನರಿಗೆ ಕೊಂಚ ನಿರಾಳವಾಗಿದೆ.

Advertisement
Advertisement

ದೆಹಲಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ವೀಕ್ಷಣಾಲಯದಲ್ಲಿ ಶುಕ್ರವಾರ ಗರಿಷ್ಠ ತಾಪಮಾನ 46.4 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದರೆ, ರಾಷ್ಟ್ರ ರಾಜಧಾನಿಯ ಮೂಲ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯದಲ್ಲಿ ಶನಿವಾರ ಕೊಂಚ ಇಳಿಕೆಯಾಗಿ  43.5 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ. ನಗರದಲ್ಲಿ 12 ವರ್ಷಗಳಲ್ಲೇ ಏಪ್ರಿಲ್‌ನಲ್ಲಿ ಒಂದು ದಿನದ ಗರಿಷ್ಠ ತಾಪಮಾನ ಇದಾಗಿದೆ. ಏಪ್ರಿಲ್ 18, 2010 ರಂದು ದೆಹಲಿಯಲ್ಲಿ ಗರಿಷ್ಠ ತಾಪಮಾನ 43.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಉತ್ತರ ಪ್ರದೇಶದ ಕೆಲವು ಪ್ರದೇಶಗಳಲ್ಲಿ  47.4 ಡಿಗ್ರಿ ತಲಪಿದೆ.  ಕೆಲವು ರಾಜ್ಯಗಳಲ್ಲಿ  ಇದೇ ಮಾದರಿಯಲ್ಲಿ ಉಷ್ಣತೆ ಏರಿಕೆ ಕಂಡಿದೆ. ಈ ವರ್ಷ ಏಪ್ರಿಲ್ ತಿಂಗಳ ವಾಯುವ್ಯ ಮತ್ತು ಮಧ್ಯ ಭಾರತದ ಸರಾಸರಿ ಗರಿಷ್ಠ ತಾಪಮಾನವು ಕಳೆದ 122 ವರ್ಷಗಳಲ್ಲಿ ದಾಖಲಾದ ಉಷ್ಣತೆಗಳಲ್ಲಿ ಅತ್ಯಧಿಕವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈ ನಡುವೆ ಕೋಲ್ಕತ್ತಾದಲ್ಲಿ 60 ದಿನಗಳ ನಂತರ ಮೊದಲ ಮಳೆಯಾಗಿದೆ. ಈಗಿನ ಪ್ರಕಾರ ಮೇ.4 ರವರೆಗೆ  ಕೋಲ್ಕತ್ತಾ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಬಹುದು  ಎಂದು ಹವಾಮಾನ ಇಲಾಖೆ ಹೇಳಿದೆ. ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಮಳೆಯಾಗದಿರುವುದು ಇದೇ ಮೊದಲು” ಎಂದು ಪ್ರಾದೇಶಿಕ ಹವಾಮಾನ ಇಲಾಖೆಯ ನಿರ್ದೇಶಕ ಜಿಕೆ ದಾಸ್ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

7 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

8 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago