06.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಮಂಡ್ಯ, ರಾಮನಗರ, ಬೆಂಗಳೂರು, ಚಾಮರಾಜನಗರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಪುತ್ತೂರು, ಧರ್ಮಸ್ಥಳ, ಕಾರ್ಕಳ ಉಡುಪಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದ. ಕ., ಕಾಸರಗೋಡು, ಉಡುಪಿ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆ ಸಾಧ್ಯತೆ ಇದೆ.
ಉತ್ತರ ಕನ್ನಡ ಒಂದೆರಡು ಭಾಗಗಳಲ್ಲಿ, ದಾವಣಗೆರೆ ಒಂದೆರಡು ಕಡೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಕೆಲವು ಕಡೆ ಮಳೆ ಜಾಸ್ತಿ ಇರಬಹುದು.
ಚಂಡಮಾರುತ : ಮತ್ತೆ ಮತ್ತೆ ಪಥ ಬದಲಿಸುತ್ತಿರುವ ಬಂಗಾಳಕೊಲ್ಲಿಯ ಚಂಡಮಾರುತ.
ಬಂಗಾಳಕೊಲ್ಲಿಗೆ ನೇರವಾಗಿ ದಕ್ಷಿಣಕ್ಕೆ ಹಿಂದೂಮಹಾಸಾಗರದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ಪ್ರಬಲವಾದ ಚಂಡಮಾರುತ ಇರುವುದರಿಂದ ಅದರ ಪ್ರಭಾವದಿಂದ ಬಂಗಾಳಕೊಲ್ಲಿಯ ಚಂಡಮಾರುತವು ಅಷ್ಟೇನು ಪ್ರಬಲವಾಗದಿದ್ದರೂ ಮೇ 8 ರಿಂದ ಸ್ವಲ್ಪ ತೀವ್ರ ಸ್ವರೂಪ ಪಡೆದು ಈಗಿನ ಪಥದಂತೆ ಮೇ 10 ರಂದು ಆಂದ್ರ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…