ವೆದರ್‌ ಮಿರರ್‌ | 07 -05 -2022 | ಅಲ್ಲಲ್ಲಿ ಮಳೆ ಸಾಧ್ಯತೆ | ಮೇ.10 ರ ನಂತರ ಮುಂಗಾರು ರೀತಿಯ ಸಾಧಾರಣ ಮಳೆ ಸಾಧ್ಯತೆ |

May 7, 2022
11:15 AM

08.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಒಂದೆರಡು ಕಡೆ ಸಾಧಾರಣ ಮಳೆ ಇರಬಹುದು.ಉಳಿದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಶಿವಮೊಗ್ಗ ಒಂದೆರಡು ಕಡೆ, ಚಿಕ್ಕಮಗಳೂರು, ಹಾಸನ, ಮೈಸೂರು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಚಂಡಮಾರುತ ಪ್ರಭಾವ ಹೇಗಿದೆ.. ?

ಚಂಡಮಾರುತ : ಈಗಿನ ಪಥದಂತೆ ಬಂಗಾಳಕೊಲ್ಲಿಯ ಚಂಡಮಾರುತವು ಮೇ 11 ರಂದು ಆಂಧ್ರಪ್ರದೇಶದ ವಿಶಾಖಪಟ್ಟಣ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಆದರೂ ಶಿಥಿಲಗೊಳ್ಳದೆ ಒರಿಸ್ಸಾ ಕರಾವಳಿ ಮೂಲಕ ಪಶ್ಚಿಮ ಬಂಗಾಳ, ಬಾಂಗ್ಲಾದೇಶದ ಕರಾವಳಿಯ ತನಕ ಸಾಗುವ ಸಾಧ್ಯತೆ ಇದೆ. ಇದರ ಪ್ರಭಾವದಿಂದ ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಮುಂಗಾರು ರೀತಿಯ ಗಾಳಿಯ ಚಲನೆ ಇರುವುದರಿಂದ ಮೇ 10 ರ ನಂತರ ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿ ಭಾಗಗಳಲ್ಲಿ ಮುಂಗಾರು ರೀತಿಯ ಮೋಡಗಳು ಏಳಬಹುದು ಹಾಗೂ ಅಲ್ಲಲ್ಲಿ ಮುಂಗಾರು ರೀತಿಯ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು
ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror