16.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಮಂಗಳೂರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡದಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ದುರ್ಬಲ ಮುಂಗಾರು ಮುಂದುವರಿಲಿದ್ದು. ಜೂನ್ 18ರಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಕೇರಳಕ್ಕೆ ಮುಂಗಾರು ಕೈ ಕೊಡುವ ಲಕ್ಷಣಗಳಿವೆ. ಮುಂಗಾರು ದುರ್ಬಲಗೊಂಡಿದ್ದರಿಂದ ಕರಾವಳಿ ಭಾಗಗಳಲ್ಲಿ ಮಳೆ ಕಡಿಮೆಯಾಗಿದೆ.
ಈಗ ಇರುವುದು ಒಳನಾಡಿನ ಮಳೆ ಹೇಗೆ? ಮುಂಗಾರು ದುರ್ಬಲಗೊಂಡಿದ್ದರಿಂದ ಮೋಡಗಳು ಪಶ್ಚಿಮ ಘಟ್ಟ ದಾಟಿ ಹೋಗಲು ಅಶಕ್ತವಾಗಿವೆ. ಈ ಕಾರಣದಿಂದ ಒಳನಾಡು ಪ್ರದೇಶಗಳಲ್ಲಿ ವಾತಾವರಣ ಉಷ್ಣಾಂಶ ಏರತೊಡಗಿದೆ. ಯಥಾಪ್ರಕಾರ ಸ್ಥಳೀಯವಾಗಿ ಮೋಡಗಳು ಉತ್ಪತ್ತಿಗೊಂಡು ಮಳೆಯಾಗುತ್ತಿದೆ. ಸ್ವಲ್ಪ ಅಂದರೆ ಸುಮಾರು 10% ಮುಂಗಾರು ಪ್ರಭಾವ ಸಹ ಇರಬಹುದು.