#ವೆದರ್‌ಮಿರರ್‌ | 12-08-2022 | ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ವಾತಾವರಣ | ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ |

August 12, 2022
10:48 AM

13.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಆಗಾಗ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಮಳೆಯ ವಾತಾವರಣದ ಮುನ್ಸೂಚನೆ ಇದೆ. ಆಗಸ್ಟ್ 13‌ ರ ನಂತರ ಅಡಿಕೆ ತೋಟಗಳಿಗೆ ಇಡೀ ದಿನ ಔಷಧ ಸಿಂಪರಣೆಗೆ ಅವಕಾಶ ಸಿಗಬಹುದು. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಒಂದೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆಯೂ ಇದೆ.

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಇನ್ನೆರಡು ದಿನಗಳಲ್ಲಿ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಗಾಳಿಯ ರಭಸ ಕಡಿಮೆಯಾದರೆ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಬಹುದು. ಈಗಿನ ಪ್ರಕಾರ ಆಗಸ್ಟ್  17‌ ರ ನಂತರ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಗುಜರಾತ್ ವಾಯುಭಾರ ಕುಸಿತವು ಮತ್ತೆ ಬಲಗೊಂಡಿದ್ದು ಪಶ್ಚಿಮ-ಉತ್ತರಕ್ಕೆ ಚಲಿಸಿ ಪಾಕಿಸ್ತಾನಕ್ಕೆ ಅಪ್ಪಳುವ ಲಕ್ಷಣಗಳಿವೆ.‌ ಆಗಸ್ಟ್ 13‌ ರಂದು ಬಂಗಾಳ ಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಪರಿಣಾಮ ತಿಳಿಯಬೇಕಾಗಿದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?
June 26, 2025
6:48 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ

You cannot copy content of this page - Copyright -The Rural Mirror

Join Our Group