Advertisement
ಸುದ್ದಿಗಳು

#ವೆದರ್‌ಮಿರರ್‌ | 12-08-2022 | ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ವಾತಾವರಣ | ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ |

Share

13.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಆಗಾಗ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಮಳೆಯ ವಾತಾವರಣದ ಮುನ್ಸೂಚನೆ ಇದೆ. ಆಗಸ್ಟ್ 13‌ ರ ನಂತರ ಅಡಿಕೆ ತೋಟಗಳಿಗೆ ಇಡೀ ದಿನ ಔಷಧ ಸಿಂಪರಣೆಗೆ ಅವಕಾಶ ಸಿಗಬಹುದು. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಒಂದೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆಯೂ ಇದೆ.

ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಇನ್ನೆರಡು ದಿನಗಳಲ್ಲಿ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಗಾಳಿಯ ರಭಸ ಕಡಿಮೆಯಾದರೆ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಬಹುದು. ಈಗಿನ ಪ್ರಕಾರ ಆಗಸ್ಟ್  17‌ ರ ನಂತರ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಗುಡುಗು ಸಹಿತ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಗುಜರಾತ್ ವಾಯುಭಾರ ಕುಸಿತವು ಮತ್ತೆ ಬಲಗೊಂಡಿದ್ದು ಪಶ್ಚಿಮ-ಉತ್ತರಕ್ಕೆ ಚಲಿಸಿ ಪಾಕಿಸ್ತಾನಕ್ಕೆ ಅಪ್ಪಳುವ ಲಕ್ಷಣಗಳಿವೆ.‌ ಆಗಸ್ಟ್ 13‌ ರಂದು ಬಂಗಾಳ ಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಪರಿಣಾಮ ತಿಳಿಯಬೇಕಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

6 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

12 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

12 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

2 days ago