ವೆದರ್‌ ಮಿರರ್‌ | 21 -08 – 2022 | ಮಲೆನಾಡು ತಪ್ಪಲು ಪ್ರದೇಶದಲ್ಲಿ ಮಳೆ | ತೀವ್ರತೆ ಪಡೆದ ವಾಯುಭಾರ ಕುಸಿತ |

August 21, 2022
11:54 AM

22.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಉತ್ತರ ಕನ್ನಡ ಸ್ವಲ್ಪ ಮಳೆ ಕಡಿಮೆ ಇದ್ದರೆ, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಆಗಾಗ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ತುಮಕೂರು, ಚಿತ್ರದುರ್ಗ, ಧಾರವಾಡ, ಬೆಳಗಾವಿ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉತ್ತರ ಭಾರತದಲ್ಲಿ ಉಂಟಾಗಿರುವ 2 ವಾಯುಭಾರ ಕುಸಿತವು ಬಹಳಷ್ಟು ಅವಾಂತರಗಳನ್ನು ಸೃಷ್ಟಿಸುತ್ತಿದೆ. ಮಧ್ಯ ಭಾರತದ ವಾಯುಭಾರ ಕುಸಿತವು ಮತ್ತಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ.

ಆಗಸ್ಟ್ 22 ರಿಂದ 24‌ ರ ತನಕ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ.
25 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಸಾಧಾರಣ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್
ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?
May 16, 2026
9:45 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ
May 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror