Advertisement
ಸುದ್ದಿಗಳು

ವೆದರ್‌ ಮಿರರ್‌ | 21 -08 – 2022 | ಮಲೆನಾಡು ತಪ್ಪಲು ಪ್ರದೇಶದಲ್ಲಿ ಮಳೆ | ತೀವ್ರತೆ ಪಡೆದ ವಾಯುಭಾರ ಕುಸಿತ |

Share

22.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಉತ್ತರ ಕನ್ನಡ ಸ್ವಲ್ಪ ಮಳೆ ಕಡಿಮೆ ಇದ್ದರೆ, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಆಗಾಗ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ತುಮಕೂರು, ಚಿತ್ರದುರ್ಗ, ಧಾರವಾಡ, ಬೆಳಗಾವಿ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉತ್ತರ ಭಾರತದಲ್ಲಿ ಉಂಟಾಗಿರುವ 2 ವಾಯುಭಾರ ಕುಸಿತವು ಬಹಳಷ್ಟು ಅವಾಂತರಗಳನ್ನು ಸೃಷ್ಟಿಸುತ್ತಿದೆ. ಮಧ್ಯ ಭಾರತದ ವಾಯುಭಾರ ಕುಸಿತವು ಮತ್ತಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ.

ಆಗಸ್ಟ್ 22 ರಿಂದ 24‌ ರ ತನಕ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ.
25 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಸಾಧಾರಣ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

39 minutes ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

1 hour ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

7 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

8 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

9 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

10 hours ago