02.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಆಗುಂಬೆ ಉತ್ತಮ ಮಳೆಯ ಮುನ್ಸೂಚನೆ ಇರುವುದರಿಂದ ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಗುಡುಗು, ಮಳೆ ಜಾಸ್ತಿ ಇರಬಹುದು. ಗಾಳಿಯ ದಿಕ್ಕು ಬದಲಾಗಿದ್ದರಿಂದ ಚಿಕ್ಕಮಗಳೂರು ನಿನ್ನೆಯ ವಾತಾವರಣ ಇರಲಾರದು.
ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ ಪಶ್ಚಿಮ ಭಾಗ, ತುಮಕೂರು ಪಶ್ಚಿಮ ಭಾಗ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಒಂದೆರಡು ಕಡೆ, ಧಾರವಾಡ, ಬೆಳಗಾವಿ, ಯಾದಗಿರಿ, ಕಲಬುರ್ಗಿ, ಬೀದರ್ ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಹಾರಾಷ್ಟ್ರ – ಕರ್ನಾಟಕ ಗಡಿಭಾಗಗಳಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದಲ್ಲಿ ಮಧ್ಯ, ಉತ್ತರ ಕೇರಳ ಕರಾವಳಿಯ ಸಮೀಪ ವಾಯುಭಾರ ಕುಸಿತ ಉಂಟಾಗಲಿದ್ದು, ಮುಂಗಾರು ಮತ್ತೆ ಚುರುಕಾಗುವ ಲಕ್ಷಣಗಳಿವೆ. ಸೆಪ್ಟೆಂಬರ್ 5ರಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement