04.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಸಂಜೆ ಕೊಡಗು ಗುಡುಗು ಸಹಿತ ಸಾಮಾನ್ಯವಾಗಿದ್ದರೆ, ಆಗುಂಬೆ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದಲ್ಲಿ ಸುಳ್ಯ, ಪುತ್ತೂರು ಸಂಜೆ ಗುಡುಗು ಸಹಿತ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆ ಇದ್ದರೆ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉಡುಪಿ ಮೋಡ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಭಾರತದ ಪಶ್ಚಿಮ ಕರಾವಳಿಯಾದ್ಯಂತ ಉಂಟಾಗಿರುವ ವಾಯುನಿಮ್ನತೆ ರೀತಿಯ ವಾತಾವರಣವು ಇವತ್ತು ಸಂಜೆ ಕೊನೆಗೊಳ್ಳುವ ಲಕ್ಷಣಗಳಿವೆ.
ಸೆಪ್ಟೆಂಬರ್ 4ರಿಂದ 9ರ ತನಕ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಹಿಂಗಾರು ರೀತಿಯ ಮಳೆ ಚುರುಕಾಗುವ ಮುನ್ಸೂಚನೆ ಇದೆ. ಸೆಪ್ಟೆಂಬರ್ 5 ರಿಂದ ಕರ್ನಾಟಕದ ಕರಾವಳಿ ಭಾಗಗಳಲ್ಲಿ (ಮುಂಗಾರು ರೀತಿಯ) ಸಹ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ಇದೆ.
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…