15.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ತುಂತುರು ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಚಿಕ್ಕಬಳ್ಳಾಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಉಳಿದ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಉಳಿದ ಚಿಕ್ಕಬಳ್ಳಾಪುರ, ತುಮಕೂರು, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕರಾವಳಿಯ ಈಗಿನ ವಾತಾವರಣವು ಇನ್ನೂ ಒಂದು ವಾರ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಕನ್ನಡ, ಉಡುಪಿ ಸೆ. 16ರಂದು ಮಳೆ ತುಂಬಾ ಕಡಿಮೆ ಇರಲಿದ್ದು ಆಮೇಲಿನ ದಿನಗಳಲ್ಲಿ ಅಲ್ಲಲ್ಲಿ ದಿನಾ ಒಂದೆರಡು ಮಳೆಯ ಬೀಳುವ ಸಾಧ್ಯತೆ ಇದೆ.
ವಾಯುಭಾರ ಕುಸಿತವು ಮಧ್ಯಪ್ರದೇಶ ತಲುಪಿದ್ದರೆ, ಗುಜರಾತ್ ನಲ್ಲಿ ಸಣ್ಣ ಪ್ರಮಾಣದ ವಾಯುನಿಮ್ನತೆ ಉಂಟಾಗಿದೆ. ಇದರಿಂದ ಮೋಡಗಳು ಉತ್ತರಕ್ಕೆ ಸೆಳೆಯುತ್ತಿವೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…