26.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಸಂಜೆಯ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಪಾವಗಡ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆಯ ವೇಳೆಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ದಾವಣಗೆರೆ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ನಿಧಾನವಾಗಿದೆ ಹಾಗೂ ಗಾಳಿಯ ಒತ್ತಡ ಕಡಿಮೆ ಇರುವುದರಿಂದ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel