29.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಮತ್ತು ಮೋಡದ ವಾತಾವರಣ ಇರಲಿದ್ದು ಸಂಜೆ, ರಾತ್ರಿ ವೇಳೆ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಕೊಡಗು, ಮೈಸೂರು, ಹಾಸನ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ದಾವಣಗೆರೆ, ಚಿತ್ರದುರ್ಗ ಬಿಸಿಲು ಹಾಗೂ ಮೋಡದ ವಾತಾವರಣ, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉತ್ತರ ಕರ್ನಾಟಕದ ಭಾಗಗಳಲ್ಲಿ ಸೆಪ್ಟೆಂಬರ್ 30ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ಇವತ್ತಿನಿಂದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ ಮಳೆ ಇದ್ದರೆ ಅಕ್ಟೊಬರ್ 2 ರಿಂದ ಉತ್ತಮ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…