ವೆದರ್‌ ಮಿರರ್‌ |12 -10 -2022 | ಹಿಂಗಾರು ಮಳೆ ಮುಂದುವರಿಯುವರಿಕೆ | ವಾಯುಭಾರ ಕುಸಿತದ ಭೀತಿ ದೂರ |

October 12, 2022
11:01 AM

13.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು ಮಳೆಯ ಮುನ್ಸೂಚನೆ ಇರುವುದಿಲ್ಲ. ಉತ್ತರ ಕನ್ನಡದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಹಾವೇರಿ, ಗದಗ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಈಗಿನ ಈ ಹಿಂಗಾರು ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ.ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಯಾವುದೇ ರೀತಿಯ ವಾಯುಭಾರ ಕುಸಿತಗಳಿಲ್ಲ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕುಂಭಮೇಳ | ಸಮಯ ಬಾರದೆ ಒಂದಿನಿತೂ ಮುಂದೆ ಸಾಗದು…
March 10, 2025
7:24 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಕುಂಭಮೇಳ | ಕುಂಭಸ್ನಾನ ಮುಗಿಸಿ ಹೊರಟಾಗ….
March 9, 2025
8:31 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಮಹಾಲಕ್ಷ್ಮಿ ರಾಜಯೋಗವು ಯಾವ ರಾಶಿಗಳಿಗೆ…?
March 9, 2025
7:57 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಊರುಗೋಲಾಗಿರುವ ಕೃಷಿ ಪತ್ತಿನ ಸಹಕಾರಿ ಸಂಘ
March 8, 2025
10:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror