ವೆದರ್ ಮಿರರ್ | 16-10-2022| ರಾಜ್ಯದ ಹಲವು ಕಡೆ ಮಳೆ‌ ನಿರೀಕ್ಷೆ | ದ ಕ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

17.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಂಜೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡದ ಭಾಗಗಳಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.ಉಡುಪಿಯ ಕಾರ್ಕಳ ಸುತ್ತಮುತ್ತ ಹಾಗೂ ಗಡಿ ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ಬಳ್ಳಾರಿ, ಗದಗ, ರಾಯಚೂರು, ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕೋಲಾರ, ಹಾವೇರಿ, ಧಾರವಾಡ, ಬೆಳಗಾವಿ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ರಾಜ್ಯದಾದ್ಯಂತ ಒಕ್ಟೊಬರ್ 17 ಮತ್ತು 18ರಂದು ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿದ್ದು 19 ಮತ್ತು 20ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಬಿರುಸಾಗಿರುವ ಸಾಧ್ಯತೆ ಇದೆ.

Advertisement


ರಾಜ್ಯದ ಉತ್ತರ ಕರಾವಳಿ ಹಾಗೂ ಒಳನಾಡಿನಾದ್ಯಂತ ಒಕ್ಟೊಬರ್ 22ರಿಂದ ಮಳೆ ತುಂಬಾ ಕಡಿಮೆಯಾಗಿ ಹೆಚ್ಚಿನ ಅವಧಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಅಕ್ಟೊಬರ್ 24 ರಿಂದ ದಕ್ಷಿಣ ಕರಾವಳಿಯಲ್ಲಿ ಸಹ ಮಳೆ ಕಡಿಮೆಯಾಗುವ ಮುನ್ಸೂಚನೆ ಇದೆ.
ಈಗನ ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ಪಶ್ಚಿಮಕ್ಕೆ ಚಲಿಸುತ್ತಿರುವುದರಿಂದ ಯಾವುದೇ ಪರಿಣಾಮಗಳಿಲ್ಲ. ಆದರೆ ಹಿಂಗಾರು ಸ್ವಲ್ಪ ಮಟ್ಟಿಗೆ ಪ್ರಭಾವಿತಗೊಳ್ಳಬಹುದು.

ಈ ಮಧ್ಯೆ ವಾಯುಭಾರ ಕುಸಿತಗಳುಂಟಾದರೆ ಬದಲಾಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

45 minutes ago

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

5 hours ago

ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ

ಅಹಮದಾಬಾದ್ ನಲ್ಲಿ  ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…

5 hours ago

ಮುಂದಿನ 1 ತಿಂಗಳು ಈ 4 ರಾಶಿಯವರಿಗೆ ಸೂರ್ಯನಿಂದ ಬ್ಯಾಡ್‌ ಟೈಮ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690

6 hours ago

ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್

ಹಲಸಿನ ಹಣ್ಣಿನ ಮೈಸೂರು ಪಾಕ್

6 hours ago