ವೆದರ್‌ ಮಿರರ್‌ | 04.11.2022 | ರಾಜ್ಯದ ಹಲವೆಡೆ ಮಳೆ ಸೂಚನೆ

November 4, 2022
1:13 PM

05.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಮೋಡದ ವಾತಾವರಣ ಇರಲಿದ್ದು ಮಧ್ಯಾಹ್ನ ಮೇಲೆ ಅಲ್ಲಲ್ಲಿ ತುಂತುರು ಕೆಲವೆಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಸೋಮವಾರಪೇಟೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂ ಜಿಲ್ಲೆಗಳ ರು ಹೆಚ್ಚಿನ ಭಾಗಗಳಲ್ಲಿ, ಬಳ್ಳಾರಿ, ರಾಯಚೂರು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಕೆಲವೆಡೆ ಮೋಡದ ಸಾಧ್ಯತೆ ಇದೆ.

ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಹಾಗೂ ದಕ್ಷಿಣ ಕರ್ನಾಟಕದ ಕರಾವಳಿಯ ಬಳಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಹಿಂಗಾರು ಸೆಳೆಯುವಲ್ಲಿ ಸ್ವಲ್ಪ ಮಟ್ಟಿಗೆ ಸಫಲವಾದೀತು.
ಈಗಿನ ಪ್ರಕಾರ ನವೆಂಬರ್ 7 ರ ನಂತರ ಬಂಗಾಳಕೊಲ್ಲಿಯಲ್ಲಿ ಶ್ರೀಲಂಕಾ ಹಾಗೂ ನಿಕೋಬಾರ್ ಮಧ್ಯೆ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದರಿಂದ ಹಿಂಗಾರು ಮತ್ತಷ್ಟು ದುರ್ಬಲಗೊಳ್ಳುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?
August 17, 2026
9:00 PM
by: ದ ರೂರಲ್ ಮಿರರ್.ಕಾಂ
ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು
August 17, 2026
8:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?
August 17, 2026
3:10 PM
by: ಸಾಯಿಶೇಖರ್ ಕರಿಕಳ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror