ವೆದರ್‌ ಮಿರರ್‌ | 10.11.2022 | ರಾಜ್ಯದ ಹಲವೆಡೆ ಸಂಜೆ ಮೋಡ ಕವಿದ ವಾತಾವರಣ

November 10, 2022
11:18 AM

11.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಭಾಗಗಳಲ್ಲಿ ಒಣ ಹವೆ ಇರಲಿದ್ದು ಸಂಜೆ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆಯ ವೇಳೆಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನವೆಂಬರ್ 12ರಂದು ತಮಿಳುನಾಡಿನ ಕರಾವಳಿ ಮೂಲಕ ಭೂ ಪ್ರವೇಶಿಸಿ, 13 ರ ಸಂಜೆ ಅಥವಾ ರಾತ್ರಿ ಉತ್ತರ ಮಧ್ಯ ಕೇರಳ ಕರಾವಳಿಯ ಮೂಲಕ ಅರಬ್ಬಿ ಸಮುದ್ರ ಪ್ರವೇಶಿಸಲಿದೆ. ಮತ್ತೆ ಪ್ರಬಲಗೊಂಡು ಯೆಮನ್ ಕರಾವಳಿ ತನಕ ಸಾಗುವ ಲಕ್ಷಣಗಳಿವೆ.

ಇದರ ಪರಿಣಾಮದಿಂದ ನವೆಂಬರ್ 11ರ ಸಂಜೆಯಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ, 12ರಿಂದ ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆ ಪ್ರಾರಂಭವಾಗುವ ಮುನ್ಸೂಚನೆ ಇದೆ.

ಈಗನ ಪ್ರಕಾರ ನವೆಂಬರ್ 15ರಂದು ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿರುವುದರಿಂದ ಮತ್ತೆ ಮಳೆ ಕಡಿಮೆಯಾಗಿ ಛಳಿ ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ
July 4, 2026
11:47 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02.07.2026 | ಕರ್ನಾಟಕದಲ್ಲಿ ಇನ್ನೂ ಕೆಲವು ದಿನ ಸಾಧಾರಣ ಮಳೆ: ಕರಾವಳಿಯಲ್ಲಿ ಜುಲೈ 5ರಿಂದ ಮಳೆ ಹೆಚ್ಚಳ ಸಾಧ್ಯತೆ, ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು 12ರ ಬಳಿಕ ಅವಕಾಶ
July 2, 2026
3:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror