05.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ದಕ್ಷಿಣ ಭಾಗಗಳಲ್ಲಿ ಮೋಡ ಸ್ವಲ್ಪ ಜಾಸ್ತಿ ಇರಬಹುದು.
ಚಾಮರಾಜನಗರ ಒಂದೆರಡು ಕಡೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು, ರಾಮನಗರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ವಾಯುಭಾರ ಕುಸಿತ : ಮೇ 7ರ ನಂತರ ಬಂಗಾಳಕೊಲ್ಲಿಯ ಉತ್ತರ ಸುಮಾತ್ರ ಹಾಗೂ ಭೂಮಧ್ಯ ರೇಖೆಗಿಂತ ಕೆಳಗೆ ದಕ್ಷಿಣ ಸುಮಾತ್ರ ಕಡಲ ಸಮೀಪ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಉತ್ತರ ಸುಮಾತ್ರ ಬಳಿಯ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ.
ಈಗಿನ ಪಥದಂತೆ ಚಂಡಮಾರುತವು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದ್ದು, ಮೇ 13ರಂದು ಬಂಗ್ಲಾದೇಶ ಹಾಗೂ ಮೆನ್ಮಾರ್ ಗೆ ಅಪ್ಪಳಿಸುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಮೇ 10ರ ವರೆಗೆ ಅಂದರೆ ಚಂಡಮಾರುತವು ಸಂಪೂರ್ಣ ಉತ್ತರಕ್ಕೆ ಚಲಿಸುವವರೆಗೆ ರಾಜ್ಯದ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈ ಚಂಡಮಾರುತದ ಪ್ರಭಾವದಿಂದ ಮುಂಗಾರು ಮಾರುತಗಳು ಚುರುಕಾಗುವ ಸಾಧ್ಯತೆ ಇದೆ. ಮುಂಗಾರು ನಿರೀಕ್ಷೆಗಿಂತ ಮೊದಲೇ ಬರುವ ಸಾಧ್ಯತೆಯೂ ಇದೆ.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…