ವೆದರ್‌ ಮಿರರ್‌ | 21.05.2023 | ಕರಾವಳಿ ಜಿಲ್ಲೆಯ ಅಲ್ಲಲ್ಲಿ ಮಳೆ ಸಾಧ್ಯತೆ

May 21, 2023
1:50 PM

22.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡಿನ ಮುಳ್ಳೇರಿಯ ಸುತ್ತಮುತ್ತ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿ ಪ್ರಮುಖ ಪಾತ್ರ ವಹಿಸಲಿದೆ.

ಕೊಡಗು ಉತ್ತಮ, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

ಚಾಮರಾಜನಗರ, ಮೈಸೂರು ಅಲ್ಲಲ್ಲಿ, ಬೆಂಗಳೂರು ಹಾಗೂ ತುಮಕೂರು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ದಕ್ಷಿಣ ಒಳನಾಡು ಭಾಗಗಳ ಹೆಚ್ಚಿನ ಕಡೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಗಾಳಿಯ ಪಾತ್ರ ಮಹತ್ವದ್ದು.

ಮಲೆನಾಡು, ದಕ್ಷಿಣ ಒಳನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯು ಮುಂದುವರಿಯಲಿದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಸ್ಥಿತಿ : ಐಎಮ್‌ಡಿ ವರದಿಯಂತೆ ಅಂಡಮಾನ್ ಗೆ ಈಗಾಗಲೇ ಮುಂಗಾರು ತಲುಪಿದ್ದು ಜೂ. 4 ರ ಆಸುಪಾಸು ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ತಿಳಿಸಿದೆ.

ಆದರೆ ಅರಬ್ಬಿ ಸಮುದ್ರದಲ್ಲಿ ಮುಂಗಾರಿಗೆ ಪೂರಕವಾದ ಗಾಳಿಯ ಚಟುವಟಿಕೆಗಳು ಇನ್ನೂ ಚುರುಕಾಗಬೇಕಾಗಿದೆ.
ಹಿಂದೂಮಹಾಸಾಗರದ ಈಗಿನ ಚಂಡಮಾರುತವು ಮುಂಗಾರು ಮುನ್ನಡೆಗೆ ಸ್ವಲ್ಪ ಮಟ್ಟಿಗೆ ತೊಡಕಾಗಿದೆ.
ಅಂತೂ ಜೂನ್ ತಿಂಗಳಲ್ಲಿ ಆರಂಭಿಕ ಮುಂಗಾರು ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror