ವೆದರ್‌ ಮಿರರ್‌ | 12.06.2023 | ಹಲವು ಕಡೆ ಮಳೆ | ದುರ್ಬಲಗೊಂಡ ಮುಂಗಾರು |

June 12, 2023
12:04 PM

13.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡದ ವಾತಾವರಣದೊಂದಿಗೆ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚಿಕ್ಕಮಗಳೂರು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಹಾಗೂ ಬಿಪರ್ ಜೋಯಿ:
ಮುಂಗಾರು ದುರ್ಬಲಗೊಂಡಿದ್ದು, ಅರಬ್ಬಿ ಸಮುದ್ರದ ಚಂಡಮಾರುತವು ಪಾಕಿಸ್ತಾನ – ಭಾರತದ ಗುಜರಾತ್ ಗಡಿಭಾಗದ ಮೂಲಕ ಪ್ರವೇಶಿಸುತ್ತಿದ್ದಂತೆಯೇ ಮತ್ತಷ್ಟು ದುರ್ಬಲಗೊಳ್ಳವ ಲಕ್ಷಣಗಳಿವೆ. ಈಗಿನ ಮುನ್ಸೂಚನೆಯಂತೆ ಜೂನ್ 18 ಮತ್ತೆ ಚುರುಕಾಗುವ ಸಾಧ್ಯತೆ ಇದೆ. (ರಾಜ್ಯದ ಒಳನಾಡು ಭಾಗಗಳಲ್ಲಿ ಸಹ)
ಬಿಪರ್ ಜೊಯಿ ಚಂಡಮಾರುತವು ಜೂನ್ 15ರ ಸಂಜೆ ಪಾಕಿಸ್ತಾನ ಭಾರತ (ಗುಜರಾತ್) ಗಡಿ ಭಾಗಕ್ಕೆ ಅಪ್ಪಳಿಸುವ ಲಕ್ಷಣಗಳಿವೆ. ಪಾಕಿಸ್ತಾನದ ಹೈದರಾಬಾದ್ ಮೂಲಕ ರಾಜಸ್ತಾನಕ್ಕೆ ಪ್ರವೇಶಿಸಿ ಶಿಥಿಲಗೊಳ್ಳುವ ಸಾಧ್ಯತೆ ಇದೆ.

ಈಗಿನ ಮುನ್ಸೂಚನೆಯಂತೆ ಜೂನ್ 14 ರಿಂದ 17ರ ತನಕ ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಸೂಕ್ತ ಸಮವಾಗಿದೆ .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror