#WeatherMirror | 09-08-2023 | ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣ | ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಲಕ್ಷಣ |

August 9, 2023
12:43 PM
ಮುಂಗಾರು ಮಳೆ ದುರ್ಬಲವಾಗುತ್ತಿದೆ. ಆ.13 ರಿಂದ ಮತ್ತಷ್ಟು ದುರ್ಬಲವಾಗುವ ಲಕ್ಷಣ ಇದೆ.

10.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಶಿವಮೊಗ್ಗ, ಹಾವೇರಿ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಷ್ಣಾಂಶ ಏರಿಕೆಯಿಂದಾಗಿ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಗುಡುಗು ಮಳೆಯ ಸಾಧ್ಯತೆ ಇದೆ. ಮುಂಗಾರು ಅತಿ ದುರ್ಬಲವಾಗಿರುವುದರಿಂದ ಆ.12ರ ತನಕ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆ.13ರಿಂದ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror