31.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು – ದಕ್ಷಿಣ ಕನ್ನಡ ಗಡಿ ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಕರಾವಳಿ ತೀರ ಭಾಗಗಳ ಒಂದೆರಡು ಕಡೆ, ಉತ್ತರ ಕನ್ನಡ ಕರಾವಳಿ ತೀರ ಭಾಗಗಳನ್ನು ಹೊರತು ಪಡಿಸಿ ಉಳಿದ ಕಡೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ.
ಹಾಸನ ಹಾಗೂ ಚಿಕ್ಕಬಳ್ಳಾಪುರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಪಾವಗಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಬೆಂಗಳೂರು, ಕೋಲಾರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ಚಾಮರಾಜನಗರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಗದಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಇವತ್ತಿನಿಂದ ರಾಜ್ಯದ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಅಧಿಕ ತಾಪಮಾನದ ಕಾರಣದಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಸೆಪ್ಟೆಂಬರ್ 6ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿಯಲ್ಲಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…