01.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಆಗಾಗ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ವಾತಾವರಣದ ಅಧಿಕ ತಾಪಮಾನದ ಕಾರಣದಿಂದ ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಸೆ. 4 ರಿಂದ ಕಾಸರಗೋಡು ಹಾಗೂ 6ರ ನಂತರ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನ ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮಳೆಯ ವಾತಾವರಣವು ಮುಂದುವರಿಯುವ ಲಕ್ಷಣಗಳಿವೆ. ಆದರೂ ಮುನ್ಸೂಚನಾ ನಕ್ಷೆಯಲ್ಲಿ ತೋರಿಸಿದಂತೆ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿಲ್ಲ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…