ವೆದರ್ ಮಿರರ್| 19-10-2023 | ರಾಜ್ಯದ ಕೆಲವು ಕಡೆ ಮಳೆ ಸಾಧ್ಯತೆ| ವಾಯುಭಾರ ಕುಸಿತದ ಲಕ್ಷಣ

October 19, 2023
11:51 AM

20.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಸುತ್ತಮುತ್ತ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಧರ್ಮಸ್ಥಳ, ಕಾರ್ಕಳ, ಬೆಳ್ತಂಗಡಿ ಸುತ್ತಮುತ್ತ ಮೋಡ, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು.
ಚಿಕ್ಕಮಗಳೂರಿನ ಕುದುರೆಮುಖ, ಶೃಂಗೇರಿ ಸುತ್ತಮುತ್ತ ಸಂಜೆ ಮೋಡ ಹಾಗೂ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನದ ಸಕಲೇಶಪುರ ಸುತ್ತಮುತ್ತ ಮೋಡ ಅಥವಾ ತುಂತುರು ಇರಬಹುದು. ಉಳಿದ ಚಿಕ್ಕಮಗಳೂರು ಹಾಗೂ ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಒಕ್ಟೊಬರ್ 23 ಅಥವಾ 24ರಂದು ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಒಮಾನ್ ಕರಾವಳಿಗೂ, ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಶಾ ಕರಾವಳಿಗೂ ಅಪ್ಪಳಿಸುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪ್ರಬಲಗೊಂಡು ಚಂಡಮಾರುತದ ಸಾಧ್ಯತೆ ಇದ್ದರೂ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅಷ್ಟೇನು ಪ್ರಬಲಗೊಳ್ಳುವ ಲಕ್ಷಣಗಳಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror