21.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು, ಉತ್ತರ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಪ್ರಸ್ತುತ ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನಷ್ಟು ಬಲಗೊಂಡು ಒಕ್ಟೊಬರ್ 24ರಂದು ಓಮನ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ಬಲಗೊಂಡು ಒಕ್ಟೊಬರ್ 24ರಂದು ಪಶ್ಚಿಮ ಬಂಗಾಳ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ.
*ಒಕ್ಟೊಬರ್ ಕೊನೇಯವರೆಗೂ ಹಿಂಗಾರು ಬಲಗೊಳ್ಳುವ ಸೂಚನೆಗಳು ಕಾಣುತ್ತಿಲ್ಲ.*
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…