19.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಕಾಸರಗೋಡು ಅಲ್ಲಲ್ಲಿ ಹಾಗೂ ದಕ್ಷಿಣ ಕನ್ನಡದ ಸುಳ್ಯ, ಪುತ್ತೂರು, ಬೆಳ್ತಂಗಡಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು ಹಾಗೂ ಚಾಮರಾಜನಗರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯಿಂದ ದಾಟಿ ಅರಬ್ಬಿ ಸಮುದ್ರದ ಕಡೆಗೆ ಸಾಗಿದ ವಾಯುಭಾರ ಕುಸಿತದಂತಹ ತಿರುವಿಕೆಯು ಶಿಥಿಲಗೊಳ್ಳುತ್ತಿರುವುದರಿಂದ ಈಗಿನ ಮೋಡದ ವಾತಾವರಣವು ಇನ್ನೆರಡು ದಿನಗಳಲ್ಲಿ ಕಡಿಮೆಯಾಗುವ ಲಕ್ಷಣಗಳಿವೆ.
ಗ್ಯಾರಂಟಿ(Guarantee) ಘೋಷಣೆ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಇದೀಗ ಒಂದು ವರ್ಷ…
ಪರೀಕ್ಷೆ(Exam) ಬರೆದು ಫಲಿತಾಂಶದ(Result) ನಿರೀಕ್ಷೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ(PUC Student) ಕರ್ನಾಟಕ ಪರೀಕ್ಷಾ ಪಾಧಿಕಾರ(Karnataka…
ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ…
ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್…
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…