23.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣದ ಮಂಗಳೂರು ಹಾಗೂ ಕೇರಳ ಗಡಿಭಾಗಗಳ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು ಉತ್ತಮ (ಸೋಮವಾರಪೇಟೆ ಸಾಮಾನ್ಯ ಇರಬಹುದು) ಮಳೆಯ ಮುನ್ಸೂಚನೆ ಇದೆ. ಹಾಸನ ಅಲ್ಲಲ್ಲಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಮೈಸೂರು, ಚಾಮರಾಜನಗರ ಹೆಚ್ಚಿನ ಭಾಗಗಳಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಮೇ 23ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಉತ್ತರಕ್ಕೆ ಚಲಿಸಿ ಮೇ 26 ಅಥವಾ 27ರಂದು ಬಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
ಈಗಿನಂತೆ ಮೇ 25ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …