ವೆದರ್‌ ಮಿರರ್‌ | 23.05.2024 | ಇಂದೂ ರಾಜ್ಯದ ಹಲವು ಕಡೆ ಮಳೆ | ಬಲಗೊಳ್ಳುತ್ತಿರುವ ಚಂಡಮಾರುತ |

May 23, 2024
12:13 PM

24.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಮಂಗಳೂರು, ಉಡುಪಿ ಕರಾವಳಿ ತೀರ ಭಾಗಗಳಲ್ಲಿ, ಮೂಡಬಿದರೆ, ಕಾರ್ಕಳ, ಬಂಟ್ವಾಳ, ಧರ್ಮಸ್ಥಳ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು ( ಸೋಮವಾರಪೇಟೆ ಸಹಿತ) ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ವಿಜಯಪುರ, ರಾಯಚೂರು, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಮೇ 25ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕುಂಠಿತವಾಗುವ ಲಕ್ಷಣಗಳಿದ್ದು, ಕರಾವಳಿಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯಲ್ಲಿ ” ರೇಮಲ್ “ ಚಂಡಮಾರುತ ರೂಪುಗೊಳ್ಳುತ್ತಲಿದ್ದು, ಇದರ ತೀವ್ರತೆಯ ಮೇಲೆ ಮುಂಗಾರು ಮುಂದುವರಿಯುವಿಕೆ ಅವಲಂಬಿಸಿದೆ. ಈಗಿನ ಪ್ರಕಾರ ಮೇ 26ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಮೇ 26 ಹಾಗೂ 27ರಂದು ಬಾಂಗ್ಲಾದೇಶ ಹಾಗೂ ಭಾರತದ ಈಶಾನ್ಯ ರಾಜ್ಯಗಳಲ್ಲಿ ಬಹಳಷ್ಟು ಅನಾಹುತ ಸೃಷ್ಠಿಸುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror