Advertisement
ವೆದರ್ ಮಿರರ್

ವೆದರ್‌ ಮಿರರ್‌ | 23.05.2024 | ಇಂದೂ ರಾಜ್ಯದ ಹಲವು ಕಡೆ ಮಳೆ | ಬಲಗೊಳ್ಳುತ್ತಿರುವ ಚಂಡಮಾರುತ |

Share

24.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಮಂಗಳೂರು, ಉಡುಪಿ ಕರಾವಳಿ ತೀರ ಭಾಗಗಳಲ್ಲಿ, ಮೂಡಬಿದರೆ, ಕಾರ್ಕಳ, ಬಂಟ್ವಾಳ, ಧರ್ಮಸ್ಥಳ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು ( ಸೋಮವಾರಪೇಟೆ ಸಹಿತ) ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ವಿಜಯಪುರ, ರಾಯಚೂರು, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಮೇ 25ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕುಂಠಿತವಾಗುವ ಲಕ್ಷಣಗಳಿದ್ದು, ಕರಾವಳಿಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯಲ್ಲಿ ” ರೇಮಲ್ “ ಚಂಡಮಾರುತ ರೂಪುಗೊಳ್ಳುತ್ತಲಿದ್ದು, ಇದರ ತೀವ್ರತೆಯ ಮೇಲೆ ಮುಂಗಾರು ಮುಂದುವರಿಯುವಿಕೆ ಅವಲಂಬಿಸಿದೆ. ಈಗಿನ ಪ್ರಕಾರ ಮೇ 26ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಮೇ 26 ಹಾಗೂ 27ರಂದು ಬಾಂಗ್ಲಾದೇಶ ಹಾಗೂ ಭಾರತದ ಈಶಾನ್ಯ ರಾಜ್ಯಗಳಲ್ಲಿ ಬಹಳಷ್ಟು ಅನಾಹುತ ಸೃಷ್ಠಿಸುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

8 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago