Weather Mirror | ಇನ್ನೊಂದು ವಾರದಲ್ಲಿ ದಕ್ಷಿಣ ಕೇರಳ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ

November 22, 2020
12:30 PM

ಈಗ ಶ್ರೀಲಂಕಾ ಕರಾವಳಿಗೆ ತಲುಪಿರುವ ಚಂಡಮಾರತವು ನ. 24ರಂದು ತಮಿಳುನಾಡು ಕರಾವಳಿಯ ಮೂಲಕ ಭಾರತ ಪ್ರವೇಶಿಸಲಿದೆ.

ತಮಿಳುನಾಡಿನಾದ್ಯಂತ ಭಾರಿ ಮಳೆಯೊಂದಿಗೆ ನ.24ರಂದು ಕೋಲಾರದ ಮೂಲಕ ಕರ್ನಾಟಕ ಪ್ರವೇಶಿಸಲಿದೆ. ಕೋಲಾರ, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2 ದಿವಸಗಳ ಕಾಲ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನ. 26 ರಂದು ಆಂದ್ರಾ ತೆಲಂಗಾಣ ಪ್ರವೇಶಿಸಿ ನ. 27ರಂದು ಶಿಥಿಲಗೊಳ್ಳುವ ಮುನ್ಸೂಚನೆ ಇದೆ.

ಈ ಅನಾಹುತದಿಂದ ಚೇತರಿಸಿಕೊಳ್ಳುವ ಮೊದಲೇ ಈಗಿನ ಪ್ರಕಾರ ನ. 29ರಂದು ಇನ್ನೊಂದು ಚಂಡಮಾರುತವು ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ.

ಈ ಚಂಡಮಾರುತದ ಪಥವು ಈಗಿನ ಪ್ರಕಾರ ತಮಿಳುನಾಡು ಮತ್ತು ದಕ್ಷಿಣ ಕೇರಳದ ಮೂಲಕ ಅರಬ್ಬಿ ಸಮುದ್ರಕ್ಕೆ ದಾಟಲಿದೆ. ದಕ್ಷಿಣ ತಮಿಳುನಾಡು ಮತ್ತು ದಕ್ಷಿಣ ಕೇರಳ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.

ಈ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಕಂಡುಬರುತ್ತಿಲ್ಲ.

ಮುಂದಿನ ಬೆಳವಣಿಗೆಗಳನ್ನು ಅಯಾ ದಿನಗಳಲ್ಲಿ ನೀಡಲಾಗುವುದು.

ನ.26 ಮತ್ತು ನ. 30ರ ಈಗಿನ ನಕ್ಷೆಯನ್ನು ಇಲ್ಲಿ ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror