Weather Mirror | ಇನ್ನೊಂದು ವಾರದಲ್ಲಿ ದಕ್ಷಿಣ ಕೇರಳ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ

November 22, 2020
12:30 PM

ಈಗ ಶ್ರೀಲಂಕಾ ಕರಾವಳಿಗೆ ತಲುಪಿರುವ ಚಂಡಮಾರತವು ನ. 24ರಂದು ತಮಿಳುನಾಡು ಕರಾವಳಿಯ ಮೂಲಕ ಭಾರತ ಪ್ರವೇಶಿಸಲಿದೆ.

ತಮಿಳುನಾಡಿನಾದ್ಯಂತ ಭಾರಿ ಮಳೆಯೊಂದಿಗೆ ನ.24ರಂದು ಕೋಲಾರದ ಮೂಲಕ ಕರ್ನಾಟಕ ಪ್ರವೇಶಿಸಲಿದೆ. ಕೋಲಾರ, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2 ದಿವಸಗಳ ಕಾಲ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನ. 26 ರಂದು ಆಂದ್ರಾ ತೆಲಂಗಾಣ ಪ್ರವೇಶಿಸಿ ನ. 27ರಂದು ಶಿಥಿಲಗೊಳ್ಳುವ ಮುನ್ಸೂಚನೆ ಇದೆ.

ಈ ಅನಾಹುತದಿಂದ ಚೇತರಿಸಿಕೊಳ್ಳುವ ಮೊದಲೇ ಈಗಿನ ಪ್ರಕಾರ ನ. 29ರಂದು ಇನ್ನೊಂದು ಚಂಡಮಾರುತವು ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ.

ಈ ಚಂಡಮಾರುತದ ಪಥವು ಈಗಿನ ಪ್ರಕಾರ ತಮಿಳುನಾಡು ಮತ್ತು ದಕ್ಷಿಣ ಕೇರಳದ ಮೂಲಕ ಅರಬ್ಬಿ ಸಮುದ್ರಕ್ಕೆ ದಾಟಲಿದೆ. ದಕ್ಷಿಣ ತಮಿಳುನಾಡು ಮತ್ತು ದಕ್ಷಿಣ ಕೇರಳ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.

ಈ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಕಂಡುಬರುತ್ತಿಲ್ಲ.

ಮುಂದಿನ ಬೆಳವಣಿಗೆಗಳನ್ನು ಅಯಾ ದಿನಗಳಲ್ಲಿ ನೀಡಲಾಗುವುದು.

ನ.26 ಮತ್ತು ನ. 30ರ ಈಗಿನ ನಕ್ಷೆಯನ್ನು ಇಲ್ಲಿ ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
April 12, 2026
3:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror