Weather Mirror | ಇನ್ನೊಂದು ವಾರದಲ್ಲಿ ದಕ್ಷಿಣ ಕೇರಳ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ

November 22, 2020
12:30 PM

ಈಗ ಶ್ರೀಲಂಕಾ ಕರಾವಳಿಗೆ ತಲುಪಿರುವ ಚಂಡಮಾರತವು ನ. 24ರಂದು ತಮಿಳುನಾಡು ಕರಾವಳಿಯ ಮೂಲಕ ಭಾರತ ಪ್ರವೇಶಿಸಲಿದೆ.

ತಮಿಳುನಾಡಿನಾದ್ಯಂತ ಭಾರಿ ಮಳೆಯೊಂದಿಗೆ ನ.24ರಂದು ಕೋಲಾರದ ಮೂಲಕ ಕರ್ನಾಟಕ ಪ್ರವೇಶಿಸಲಿದೆ. ಕೋಲಾರ, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2 ದಿವಸಗಳ ಕಾಲ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನ. 26 ರಂದು ಆಂದ್ರಾ ತೆಲಂಗಾಣ ಪ್ರವೇಶಿಸಿ ನ. 27ರಂದು ಶಿಥಿಲಗೊಳ್ಳುವ ಮುನ್ಸೂಚನೆ ಇದೆ.

ಈ ಅನಾಹುತದಿಂದ ಚೇತರಿಸಿಕೊಳ್ಳುವ ಮೊದಲೇ ಈಗಿನ ಪ್ರಕಾರ ನ. 29ರಂದು ಇನ್ನೊಂದು ಚಂಡಮಾರುತವು ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ.

ಈ ಚಂಡಮಾರುತದ ಪಥವು ಈಗಿನ ಪ್ರಕಾರ ತಮಿಳುನಾಡು ಮತ್ತು ದಕ್ಷಿಣ ಕೇರಳದ ಮೂಲಕ ಅರಬ್ಬಿ ಸಮುದ್ರಕ್ಕೆ ದಾಟಲಿದೆ. ದಕ್ಷಿಣ ತಮಿಳುನಾಡು ಮತ್ತು ದಕ್ಷಿಣ ಕೇರಳ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.

ಈ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಕಂಡುಬರುತ್ತಿಲ್ಲ.

ಮುಂದಿನ ಬೆಳವಣಿಗೆಗಳನ್ನು ಅಯಾ ದಿನಗಳಲ್ಲಿ ನೀಡಲಾಗುವುದು.

ನ.26 ಮತ್ತು ನ. 30ರ ಈಗಿನ ನಕ್ಷೆಯನ್ನು ಇಲ್ಲಿ ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror