ಈಗ ಶ್ರೀಲಂಕಾ ಕರಾವಳಿಗೆ ತಲುಪಿರುವ ಚಂಡಮಾರತವು ನ. 24ರಂದು ತಮಿಳುನಾಡು ಕರಾವಳಿಯ ಮೂಲಕ ಭಾರತ ಪ್ರವೇಶಿಸಲಿದೆ.
ತಮಿಳುನಾಡಿನಾದ್ಯಂತ ಭಾರಿ ಮಳೆಯೊಂದಿಗೆ ನ.24ರಂದು ಕೋಲಾರದ ಮೂಲಕ ಕರ್ನಾಟಕ ಪ್ರವೇಶಿಸಲಿದೆ. ಕೋಲಾರ, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2 ದಿವಸಗಳ ಕಾಲ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನ. 26 ರಂದು ಆಂದ್ರಾ ತೆಲಂಗಾಣ ಪ್ರವೇಶಿಸಿ ನ. 27ರಂದು ಶಿಥಿಲಗೊಳ್ಳುವ ಮುನ್ಸೂಚನೆ ಇದೆ.
ಈ ಅನಾಹುತದಿಂದ ಚೇತರಿಸಿಕೊಳ್ಳುವ ಮೊದಲೇ ಈಗಿನ ಪ್ರಕಾರ ನ. 29ರಂದು ಇನ್ನೊಂದು ಚಂಡಮಾರುತವು ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ.
ಈ ಚಂಡಮಾರುತದ ಪಥವು ಈಗಿನ ಪ್ರಕಾರ ತಮಿಳುನಾಡು ಮತ್ತು ದಕ್ಷಿಣ ಕೇರಳದ ಮೂಲಕ ಅರಬ್ಬಿ ಸಮುದ್ರಕ್ಕೆ ದಾಟಲಿದೆ. ದಕ್ಷಿಣ ತಮಿಳುನಾಡು ಮತ್ತು ದಕ್ಷಿಣ ಕೇರಳ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.
ಈ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಕಂಡುಬರುತ್ತಿಲ್ಲ.
ಮುಂದಿನ ಬೆಳವಣಿಗೆಗಳನ್ನು ಅಯಾ ದಿನಗಳಲ್ಲಿ ನೀಡಲಾಗುವುದು.
ನ.26 ಮತ್ತು ನ. 30ರ ಈಗಿನ ನಕ್ಷೆಯನ್ನು ಇಲ್ಲಿ ನೀಡಲಾಗಿದೆ.
ರಾಜ್ಯದಲ್ಲಿ ಮುಂಗಾರು ಇನ್ನೂ ದುರ್ಬಲವಾಗಿದ್ದು, ಸುಳ್ಯ, ಕಡಬ ಹಾಗೂ ಸೋಮವಾರಪೇಟೆ ಭಾಗಗಳಲ್ಲಿ ಮಾತ್ರ…
ದಕ್ಷಿಣ ಸ್ಪೇನ್ನಲ್ಲಿ ಭೀಕರ ಕಾಡ್ಗಿಚ್ಚಿನಿಂದ 12 ಮಂದಿ ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.…
ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ.…
ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…