ಹವಾಮಾನ ವರದಿ | 09.07.2024 | ರಾಜ್ಯದೆಲ್ಲೆಡೆ ಸಾಮಾನ್ಯ ಮಳೆ | ಜು.11ರ ನಂತರ ಮಳೆ ಚುರುಕಾಗುವ ಸಾಧ್ಯತೆ |

July 9, 2024
1:11 PM
10.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ ಸಾಮಾನ್ಯ ಮಳೆ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯಕ್ಕಿಂತ ಸ್ವಲ್ಪ ಜಾಸ್ತಿ ಮಳೆಯಾಗುವ ಮುನ್ಸೂಚನೆ ಇದ್ದರೂ ತೀವ್ರತೆ ಕಡಿಮೆ ಇರಬಹುದು.
ಧಾರವಾಡ, ಬೆಳಗಾವಿ, ಚಿಕ್ಕೋಡಿ ಜಿಲ್ಲೆಗಳಲ್ಲಿ ಉತ್ತಮ ಹಾಗೂ ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೋಲಾರ ಒಂದೆರಡು ಕಡೆ, ತುಮಕೂರು (ಪಾವಗಢ ಸೇರಿದಂತೆ) ಒಂದೆರಡು ಕಡೆ, ಚಿತ್ರದುರ್ಗ, ವಿಜಯಪುರ, ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 12ರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿವೆ.
ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ, ಮಲೆನಾಡು ಭಾಗಗಳಲ್ಲಿ ಕಾಪಿ ತೋಟಗಳಿಗೆ ಔಷಧಿ ಸಿಂಪಡಿಸಲು ಇವತ್ತು ಹಾಗೂ ಜುಲೈ 11ರ ತನಕ ಸ್ವಲ್ಪ ಅವಕಾಶ ಸಿಗಬಹುದು. ಮಧ್ಯಾಹ್ನ ನಂತರ ಅವಕಾಶ ಕಡಿಮೆಯಾಗಬಹುದು. ಮಳೆ ಸಂಪೂರ್ಣ ಬಿಟ್ಟು ಸಿಗುವ ಸಾಧ್ಯತೆ ಕಡಿಮೆ.

Advertisement
Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ
July 28, 2025
8:34 PM
by: The Rural Mirror ಸುದ್ದಿಜಾಲ
ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
July 28, 2025
8:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group