Advertisement
ವೆದರ್ ಮಿರರ್

ಹವಾಮಾನ ವರದಿ | 28.08.2024 | ರಾಜ್ಯದ ಕೆಲವೆಡೆ ಉತ್ತಮ ಮಳೆ | ಕೆಲವೆಡೆ ತುಂತುರು ಮಳೆ

Share

29.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಕೊಡಗು ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಗುಜರಾತ್ ವಾಯುಭಾರ ಕುಸಿತದ ಪ್ರಭಾವ ಕಡಿಮೆಯಾಗುತ್ತಲಿದ್ದು, ಆ. 31ರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿನ ಈಗಿನ ಮಳೆಯೂ ಕಡಿಮೆಯಾಗುವ ಲಕ್ಷಣಗಳಿದ್ದರೂ, ಕರಾವಳಿಯಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುನಿಮ್ನತೆಯ ಪರಿಣಾಮವನ್ನು ಕಾದು ನೋಡಬೇಕಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

22 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

2 days ago