ಸುದ್ದಿಗಳು

ಹವಾಮಾನ ವರದಿ | 29.8.2024 | ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

30.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಅಲ್ಲಲ್ಲಿ ತುಂತುರು ಹಾಗೂ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಮೈಸೂರು ಉತ್ತರ, ಚಾಮರಾಜನಗರ (ಕೊಳ್ಳೇಗಾಲ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ – ಹಾವೇರಿ ಗಡಿಭಾಗಗಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ದಾವಣಗೆರೆ, ಹಾವೇರಿ ಹಾಗೂ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಗುಜರಾತ್ ವಾಯುಭಾರ ಕುಸಿತವು ಆ. 30ರಂದು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿ ಪಾಕಿಸ್ತಾನದ ಕರಾವಳಿ ಮೂಲಕ ಸಾಗಿ ಆ. 31ರಂದು ಮಸ್ಕತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ತಿರುಗುವಿಕೆ ಉಂಟಾಗಿದ್ದು, ವಾಯುಭಾರ ಕುಸಿತವಾಗುವ ಲಕ್ಷಣಗಳಿಲ್ಲದಿದ್ದರೂ ಪರಿಸ್ಥಿತಿ ಕಾದು ನೋಡಬೇಕಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

2 hours ago

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

4 hours ago

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

8 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

8 hours ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

8 hours ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

9 hours ago