31.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಕಡಿಮೆ ಇರಬಹುದು.
ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮತ್ತು ಶಿವಮೊಗ್ಗ ಪೂರ್ವ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಪಾವಗಡ, ಬಳ್ಳಾರಿ – ಆಂದ್ರಾ ಗಡಿಭಾಗಗಳಲ್ಲಿ, ರಾಯಚೂರು, ಯಾದಗಿರಿ, ಬೀದರ್ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಉಳಿದ ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಗುಜರಾತ್ ವಾಯುಭಾರ ಕುಸಿತವು ಇಂದು ರಾತ್ರಿ ಅರಬ್ಬಿ ಸಮುದ್ರ ಪ್ರವೇಶಿಸಿ ಸೆ.2ರಂದು ಮಸ್ಕತ್ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಇದರಿಂದ ಮುಂಗಾರು ಮಾರುತಗಳು ಉತ್ತರಕ್ಕೆ ಸೆಳೆಯಲ್ಪಡುವುದರಿಂದ ರಾಜ್ಯದಲ್ಲಿ ಆ. 31 ಹಾಗೂ ಸೆ.1ರಂದು ಮಳೆ ಕಡಿಮೆಯಾಗಲಿದ್ದು, ಸೆ. 2ರಿಂದ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಇದೇ ಸಮಯದಲ್ಲಿ ಬಂಗಾಳಕೊಲ್ಲಿಯ ತಿರುಗುವಿಕೆಯೂ ಶಿಥಿಲಗೊಂಡರೆ ಮಾತ್ರ ರಾಜ್ಯದ ಕರಾವಳಿಯಲ್ಲೂ ಮಳೆಯ ಪ್ರಮಾಣ ಕಡಿಮೆಯಾಗಬಹುದು. ಪರಿಸ್ಥಿತಿ ಕಾದುನೋಡಬೇಕಾಗಿದೆ. ಸೆ. 2ರಂದು ಸ್ಪಷ್ಟತೆ ಸಿಗಬಹುದು.ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…