ಹವಾಮಾನ ವರದಿ | 28.09.2024 | ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

September 28, 2024
12:16 PM

29.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆ. 30ರವರೆಗೂ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಕೊಡಗು ಬಹುತೇಕ ಭಾಗಗಳಲ್ಲಿ, ಹಾಸನ, ಚಿಕ್ಕಮಗಳೂರು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ, ಸೆ.30ರ ವರೆಗೂ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿಯ ವೇಳೆ ಗುಡುಗು ಸಹಿತ ಉತ್ತಮ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಒಂದೆರಡು ದಿನಗಳ ಬಿಡುವಿದ್ದರೂ ಮತ್ತೆ ಗುಡುಗು ಮಳೆ ಮುಂದುವರಿಯಲಿದೆ.

ಒಹಾವೇರಿ, ಧಾರವಾಡ, ಬೆಳಗಾವಿ, ಗದಗ, ರಾಯಚೂರು, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಒ. 1 ಅಥವಾ 2ರ ತನಕವೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ನಂತರ ಒಂದೆರಡು ದಿನಗಳ ಬಿಡುವಿದ್ದರೂ, ಮುಂದಿನ 10 ದಿನಗಳವರೆಗೂ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ಗಾಳಿಯು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳೂ ಸೇರಿಕೊಂಡು ರಾಜ್ಯದಲ್ಲಿ ಗುಡುಗು ಸಹಿತ ಮಳೆಗೆ ಕಾರಣವಿರಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ
August 3, 2026
5:45 PM
by: ದ ರೂರಲ್ ಮಿರರ್.ಕಾಂ
ಭಾರಿ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಗೆ ಆರೆಂಜ್ – ಎಲ್ಲೋ ಅಲರ್ಟ್‌ | ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
August 3, 2026
4:38 PM
by: ದ ರೂರಲ್ ಮಿರರ್.ಕಾಂ
ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?
August 3, 2026
3:37 PM
by: ಮಹೇಶ್ ಪುಚ್ಚಪ್ಪಾಡಿ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror