ಹವಾಮಾನ ವರದಿ | 29.09.2024 | ಮುಂದಿನ 10 ದಿನಗಳ ಕಾಲ ಗುಡುಗು ಸಹಿತ ಮಳೆ ನಿರೀಕ್ಷೆ

September 29, 2024
12:28 PM

30.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ (ಮಧ್ಯೆ ಒಂದೆರಡು ದಿನ ಕಡಿಮೆ ಇರಬಹುದು) ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ) ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ.
ತಮಿಳುನಾಡು ಭಾಗದಿಂದ ಈಗ ಬೀಸುತ್ತಿರುವ ಗಾಳಿಯು ಮುಂದುವರಿಯಲಿದೆ. ಹಿಂಗಾರು ಇನ್ನಷ್ಟೇ ಆರಂಭವಾಗಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror