15.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆಯಿಂದ ಬಿಟ್ಟು ಬಿಟ್ಟು ವಾಯುಭಾರ ಕುಸಿತದ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ 16, 17 ಹಾಗೂ 18ರಂದು ಭಾರಿ ಮಳೆಯ ಮುನ್ಸೂಚನೆ ಇದೆ. ನಂತರ 2 ದಿವಸಗಳ ಮಟ್ಟಿಗೆ ಕಡಿಮೆಯಾದರೂ 21ರಿಂದ ಗುಡುಗು ಮಳೆಯೊಂದಿಗೆ ಹಿಂಗಾರು ಅರಂಭವಾಗುವ ಸಾಧ್ಯತೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ವಾಯುಭಾರ ಕುಸಿತದ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಜಾಸ್ತಿ ಇರಬಹುದು.
ಈಗಿನಂತೆ ಅ. 16,17 ಹಾಗೂ 18ರಂದು ಅತಿ ಭಾರಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾದರೂ 21ರಿಂದ ಹಿಂಗಾರು ಆರಂಭವಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬೆಳಿಗ್ಗೆಯಿಂದ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಅ. 17ರಂದು ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಒಳನಾಡು ಭಾಗಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು ಅ.16 ಹಾಗೂ 17ರಂದು ಭಾರಿ ಮಳೆಯ ಮುನ್ಸೂಚನೆ ಇದೆ. 18 ರಿಂದ ಕಡಿಮೆಯಾದರೂ, ಉತ್ತರ ಒಳನಾಡು ಭಾಗಗಳಲ್ಲಿ 19 ಅಥವಾ 20 ರಿಂದ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ 21ರಿಂದ ಹಿಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಇದೆ.ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…