ಸುದ್ದಿಗಳು

ಹವಾಮಾನ ವರದಿ | 17.10.2024 | ಸಾಮಾನ್ಯ ಮಳೆ | ಅ.24 ನಂತರ ಮಳೆ ಕಡಿಮೆ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

18.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಬೆಳಿಗ್ಗೆಯಿಂದಲೇ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ.24ರಿಂದ ಹಿಂಗಾರು ದುರ್ಬಲಗೊಂಡು ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡ, ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಒಳನಾಡು ಅಥವಾ ಬಯಲುಸೀಮೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ. 24ರಿಂದ ಮಳೆ ಕ್ಷೀಣಿಸುವ ಲಕ್ಷಣಗಳಿವೆ.

Advertisement

ಹಾವೇರಿ, ಧಾರವಾಡ, ಬೆಳಗಾವಿ (ಅಥಣಿ ಸಹಿತ), ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಬೆಳಿಗ್ಗೆಯಿಂದ ಮಳೆಯಾಗುತ್ತಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ) ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ. 22ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ.
Advertisement

ಅರಬ್ಬಿ ಸಮುದ್ರದಲ್ಲಿ ಕರ್ನಾಟಕ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರ ಪರಿಣಾಮ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಪಶ್ಚಿಮದ ಮೋಡದಿಂದ ಹಾಗೂ ಉತ್ತರ ಕರ್ನಾಟಕದ ಭಾಗಗಳಲ್ಲಿ ಹಿಂಗಾರು (ಪೂರ್ವದ ಮೋಡದಿಂದ) ಮಳೆಯಾಗುತ್ತಿದೆ.

ಅ. 20 ಅಥವಾ 21ರಂದ ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಉತ್ತರಾಭಿಮುಖವಾಗಿ ಚಲಿಸುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ಹಿಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 05-08-2025 | ಆ.6 ರಂದು ಕೆಲವು ಕಡೆ ಮಳೆ | ಆ.14 ನಂತರ ಹವಾಮಾನ ಹೇಗಿರಬಹುದು..?

ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…

6 hours ago

700 ಕ್ಕೂ ಅಧಿಕ ರೆಸಿಪಿ | ದಿವ್ಯ ಮಹೇಶ್‌ ಅವರಿಗೆ “ಪಾಕ ಪ್ರವೀಣೆ” ಪ್ರಶಸ್ತಿ

ದ ರೂರಲ್‌ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…

11 hours ago

ಮಕ್ಕಳ ಪುಟ | ಪಂಜದ ಕ್ರಿಯೇಟಿವ್‌ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ |

ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…

12 hours ago

ವಿಶ್ವದಲ್ಲಿ ಅಡಿಕೆ ಕೃಷಿ ಹೇಗಿದೆ..? ಭಾರತದಲ್ಲಿ ಅಡಿಕೆ ಆಮದು ಎಷ್ಟು..?

ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…

12 hours ago

ಪ್ಲಾಸ್ಟಿಕ್‌ ತ್ಯಾಜ್ಯ ಕಡಿಮೆ ಮಾಡಲು ಏನು ಕ್ರಮ ? ಅಧ್ಯಯನ ವರದಿ ನಿಯಮ ಗ್ರಾಮಗಳಲ್ಲೂ ಜಾರಿಯಾಗಲಿ

ಪ್ಲಾಸ್ಟಿಕ್ ಮಾಲಿನ್ಯವು  ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…

12 hours ago

ಕೃಷಿಯಲ್ಲಿ ಮೀಥೇನ್ ಕಡಿತದ ಗುರಿ | ವಿಯೆಟ್ನಾಂನಲ್ಲಿ ವಿಶೇಷ ಮಾರ್ಗಸೂಚಿ

ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ  ಹೊರಸೂಸುವ ಮೀಥೇನ್ ಅನ್ನು 30% ರಷ್ಟು…

22 hours ago