Advertisement
ವೆದರ್ ಮಿರರ್

ಹವಾಮಾನ ವರದಿ| 20-10-2024 | ರಾಜ್ಯದಲ್ಲಿ ತಗ್ಗಿದ ಮಳೆಯ ಪ್ರಮಾಣ | ಬಲಗೊಳ್ಳುತ್ತಿರುವ ಡಾನಾ ಚಂಡಮಾರುತ

Share

21.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಜಿಲ್ಲೆಯಲ್ಲಿ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗಿದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲೂ ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾಗಿದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಮತ್ತೆ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾಸ್ತಿ ಇರಬಹುದು.
ಈಗಿನಂತೆ ಒಕ್ಟೊಬರ್ 21ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 25ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕೊಪ್ಪಳ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಕ್ಟೊಬರ್ 25ರ ತನಕ ಹಿಂಗಾರು ಮಳೆ ಮುಂದುವರಿಯುವ ಸೂಚನೆಗಳಿವೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದೆ. ಇದು ಪ್ರಭಲಗೊಂಡು “ಡಾನಾ” ಚಂಡಮಾರುತವಾಗಿ ಒಡಿಸ್ಸಾ ಕರಾವಳಿಗೆ ಒಕ್ಟೊಬರ್ 24ರಂದು ಅಪ್ಪಳಿಸುವ ಲಕ್ಷಣಗಳಿವೆ. ಇದರೊಂದಿಗೆ ಹಿಂಗಾರು ಸಂಪೂರ್ಣ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

3 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

11 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

13 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

14 hours ago