Advertisement
ವೆದರ್ ಮಿರರ್

ಹವಾಮಾನ ವರದಿ| 20-10-2024 | ರಾಜ್ಯದಲ್ಲಿ ತಗ್ಗಿದ ಮಳೆಯ ಪ್ರಮಾಣ | ಬಲಗೊಳ್ಳುತ್ತಿರುವ ಡಾನಾ ಚಂಡಮಾರುತ

Share

21.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಜಿಲ್ಲೆಯಲ್ಲಿ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗಿದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲೂ ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾಗಿದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಮತ್ತೆ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾಸ್ತಿ ಇರಬಹುದು.
ಈಗಿನಂತೆ ಒಕ್ಟೊಬರ್ 21ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 25ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕೊಪ್ಪಳ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಕ್ಟೊಬರ್ 25ರ ತನಕ ಹಿಂಗಾರು ಮಳೆ ಮುಂದುವರಿಯುವ ಸೂಚನೆಗಳಿವೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದೆ. ಇದು ಪ್ರಭಲಗೊಂಡು “ಡಾನಾ” ಚಂಡಮಾರುತವಾಗಿ ಒಡಿಸ್ಸಾ ಕರಾವಳಿಗೆ ಒಕ್ಟೊಬರ್ 24ರಂದು ಅಪ್ಪಳಿಸುವ ಲಕ್ಷಣಗಳಿವೆ. ಇದರೊಂದಿಗೆ ಹಿಂಗಾರು ಸಂಪೂರ್ಣ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

4 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

4 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

23 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

1 day ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago