Advertisement
ವೆದರ್ ಮಿರರ್

ಹವಾಮಾನ ವರದಿ | 22.10.2024 | ರಾಜ್ಯದಲ್ಲಿ ಸಾಮಾನ್ಯ ಮಳೆ ಮುಂದುವರಿಕೆ | ಅ.25ರಿಂದ ಮಳೆ ಕಡಿಮೆ ಸಾಧ್ಯತೆ| ಅ.24ರಂದು ಒಡಿಸ್ಸಾ ಪಶ್ಚಿಮ ಬಂಗಾಳ ಕರಾವಳಿಗೆ ಡಾನಾ ಚಂಡಮಾರುತ

Share

23.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement
Advertisement

ಕಳೆದ ಮೂರು ನಾಲ್ಕು ದಿನಗಳ ಕಾಲ ರಾಜ್ಯದ ಉತ್ತರ ಕರಾವಳಿ, ಶಿವಮೊಗ್ಗ ಭಾಗಗಳಲ್ಲಿ ರಾತ್ರಿ ಅನಿರೀಕ್ಷಿತ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ಅರಬ್ಬಿ ಸಮುದ್ರದ ಕರಾವಳಿ ತೀರದಲ್ಲಿ ಗಾಳಿಯ ತಿರುಗುವಿಕೆಯ ಪರಿಣಾಮದಿಂದ ಈ ಮಳೆ ಇದ್ದಿರಬಹುದು. ಇವತ್ತು ಈಗಿನಂತೆ ಅಂತಹ ಗಾಳಿಯ ಚಲನೆ ಕಾಣಿಸುತ್ತಿಲ್ಲವಾದ್ದರಿಂದ ಭಾರಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.

Advertisement

ಕಾಸರಗೋಡು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ. 25ರಿಂದ ಮಳೆ ಕಡಿಮೆಯಾಗಿ 26ರಿಂದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಬಹುದು.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ .25ರಿಂದ ಮಳೆ ಕಡಿಮೆಯಾಗಲಿದ್ದು, ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಲಕ್ಷಣಗಳಿವೆ.

Advertisement

ಹಿಂಗಾರು ಮಾರುತಗಳ ದಿಕ್ಕು ಬದಲಾಗಿದ್ದರಿಂದ ಒಳನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆಯೇ? ಮಾರುತಗಳು ಆಗ್ನೇಯದಿಂದ ವಾಯವ್ಯಕ್ಕೆ (ಸಾಂಪ್ರದಾಯಿಕವಾಗಿ ಈಶಾನ್ಯದಿಂದ ನೈರುತ್ಯಕ್ಕೆ) ಚಲಿಸುತ್ತಿವೆ.

ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

Advertisement
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಡಾನಾ ಚಂಡಮಾರುತವು ಅ.24ರಂದು ಪಶ್ಚಿಮ ಬಂಗಾಳ ಹಾಗೂ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಉತ್ತರ ಒಳನಾಡಿನಲ್ಲಿ ಅ. 24ರಿಂದ ಹಾಗೂ ದಕ್ಷಿಣ ಒಳನಾಡಿನಲ್ಲಿ ಅ. 25ರಿಂದ ಮಳೆ ಕಡಿಮೆಯಾಗಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ | ಪ್ರವಾಸ ಮುಂದೂಡಲು ಜಿಲ್ಲಾಡಳಿತ ಸೂಚನೆ |

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸವನ್ನು…

16 hours ago

ಬೆಂಗಳೂರಿನಲ್ಲಿ ಮತ್ತೆ ಮಳೆಯ ಅಬ್ಬರ | ಸಿಲಿಕಾನ್‌ ಸಿಟಿಯ ಎಲ್ಲೆಲ್ಲೂ ನೀರು..! | ಇಂದು ಕೂಡಾ ಮಳೆ ಸಾಧ್ಯತೆ |

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಬೆಂಗಳೂರಿನಲ್ಲಿ ಇಂದು ಕೂಡಾ ಮೋಡ ಕವಿದ…

16 hours ago

ಕೋಲಾರದಲ್ಲಿ ಪಶು ಸಂಜೀವಿನಿ ಯೋಜನೆ ಅನುಷ್ಠಾನ | ಪಶು ಸಖಿಯರಿಗೆ ತರಬೇತಿ |

ಪಶು ಸಂಗೋಪನಾ ಇಲಾಖೆಯ ಸಂಜೀವಿನಿ ಯೋಜನೆಯಡಿ, ಕೋಲಾರದಲ್ಲಿ ಪಶು ಸಖಿ ತರಬೇತಿ ಕಾರ್ಯಕ್ರಮ…

16 hours ago

ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ…! | ಕೃಷಿ ವಲಯದ ಅಭಿವೃದ್ದಿಯಲ್ಲಿ ಹಿನ್ನಡೆ | ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶ |

ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ.

17 hours ago

153 ಎಕರೆ ಪ್ರದೇಶದಲ್ಲಿ ಔಷಧೀಯ ಸಸ್ಯವನ, ಪಕ್ಷಿಲೋಕ ನಿರ್ಮಾಣ

ಬೆಂಗಳೂರಿನ ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ನೀಲಗಿರಿ ನೆಡುತೋಪು ಪ್ರದೇಶದಲ್ಲಿ ಔಷಧೀಯ…

17 hours ago